ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm