ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm