ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm