ಬ್ರೇಕಿಂಗ್ ನ್ಯೂಸ್
29-09-21 03:10 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದ ಯುವಕನನ್ನು ಠಾಣೆಯಲ್ಲಿಯೇ ಪೊಲೀಸ್ ಪೇದೆಯೊಬ್ಬ ದೊಣ್ಣೆಯಿಂದ ಮನಬಂದಂತೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಗ್ರಾಮಾಂತರ ಜಿಲ್ಲಾ ಪೊಲೀಸರ ಮಾನ ಬೀದಿಯಲ್ಲಿ ಹರಾಜು ಹಾಕಿದೆ.
ಪೊಲೀಸರ ದೌರ್ಜನ್ಯ ಸಂಬಂಧ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನಂತೆ ಕಾಣುವ ಯುವಕನ ಬಟ್ಟೆ ಬಿಚ್ಚಿಸಿ ಕಿಟಕಿ ಮುಂದೆ ನಿಲ್ಲಿಸಿ ದೊಣ್ಣೆಯಿಂದ ಕುಂಡೆ ಮೇಲೆ ವಿಕೃತವಾಗಿ ಹಲ್ಲೆ ಮಾಡಿ ಆ ಬಳಿಕ ಕೂರಿಸಿ ಪಾದಕ್ಕೆ ವಿಕೃತವಾಗಿ ಬಾರಿಸಿದ್ದಾನೆ. ಆತ ಕಾಲಿಗೆ ಬಿದ್ದು ಬೇಡಿಕೊಂಡರೂ ಪೇದೆ ತನ್ನ ದರ್ಪ ಮುಂದುವರೆಸಿದ್ದಾನೆ.

ಯಾವುದೇ ಆರೋಪಿಯನ್ನು ವಶಕ್ಕೆ ಪಡೆದರೆ ವಿಚಾರಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ಪೊಲೀಸರು ಹಲ್ಲೆ ಮಾಡುವ ವಿಡಿಯೋ ನೋಡಿದರೆ ಎಂಥವರಿಗೂ ಪೊಲೀಸರ ಮೇಲೆ ಸಿಟ್ಟು ಬರುತ್ತೆ. ಪದೇಪದೆ ಬೇಡಿಕೊಂಡರೂ ದೊಣ್ಣೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ವಿಡಿಯೋ ನೋಡುಗರನ್ನೇ ಬೆಚ್ಚಿ ಬೀಳಿಸುತ್ತದೆ. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವಾ ಎಂಬ ಪ್ರಶ್ನೆ ಕಾಡುತ್ತದೆ. ಇನ್ನು ಈ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣರೆಡ್ಡಿ ಪಕ್ಷದ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.
ವಿಚಾರಣೆ ನೆಪದಲ್ಲಿ ಯುವಕನನ್ನು ಕರೆತಂದು ವಿಕೃತವಾಗಿ ಹಲ್ಲೆ ಮಾಡುವ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಮಾನವ ಹಕ್ಕು ಅಯೋಗದ ಸದಸ್ಯ ಆರ್.ಕೆ. ದತ್ತಾ ಅವರು, ''ಹೆಬ್ಬಗೋಡಿ ಪೊಲೀಸರು ಹಲ್ಲೆ ಮಾಡುವ ಈ ಕೃತ್ಯದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಡಾ. ಕೋನಾ ವಂಶಿ ಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Youth brutally beaten by Police constable of Hebbagodi Police station Human right case registered. The video of their has gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm