ಬ್ರೇಕಿಂಗ್ ನ್ಯೂಸ್
29-09-21 03:10 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದ ಯುವಕನನ್ನು ಠಾಣೆಯಲ್ಲಿಯೇ ಪೊಲೀಸ್ ಪೇದೆಯೊಬ್ಬ ದೊಣ್ಣೆಯಿಂದ ಮನಬಂದಂತೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಗ್ರಾಮಾಂತರ ಜಿಲ್ಲಾ ಪೊಲೀಸರ ಮಾನ ಬೀದಿಯಲ್ಲಿ ಹರಾಜು ಹಾಕಿದೆ.
ಪೊಲೀಸರ ದೌರ್ಜನ್ಯ ಸಂಬಂಧ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನಂತೆ ಕಾಣುವ ಯುವಕನ ಬಟ್ಟೆ ಬಿಚ್ಚಿಸಿ ಕಿಟಕಿ ಮುಂದೆ ನಿಲ್ಲಿಸಿ ದೊಣ್ಣೆಯಿಂದ ಕುಂಡೆ ಮೇಲೆ ವಿಕೃತವಾಗಿ ಹಲ್ಲೆ ಮಾಡಿ ಆ ಬಳಿಕ ಕೂರಿಸಿ ಪಾದಕ್ಕೆ ವಿಕೃತವಾಗಿ ಬಾರಿಸಿದ್ದಾನೆ. ಆತ ಕಾಲಿಗೆ ಬಿದ್ದು ಬೇಡಿಕೊಂಡರೂ ಪೇದೆ ತನ್ನ ದರ್ಪ ಮುಂದುವರೆಸಿದ್ದಾನೆ.
ಯಾವುದೇ ಆರೋಪಿಯನ್ನು ವಶಕ್ಕೆ ಪಡೆದರೆ ವಿಚಾರಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ಪೊಲೀಸರು ಹಲ್ಲೆ ಮಾಡುವ ವಿಡಿಯೋ ನೋಡಿದರೆ ಎಂಥವರಿಗೂ ಪೊಲೀಸರ ಮೇಲೆ ಸಿಟ್ಟು ಬರುತ್ತೆ. ಪದೇಪದೆ ಬೇಡಿಕೊಂಡರೂ ದೊಣ್ಣೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ವಿಡಿಯೋ ನೋಡುಗರನ್ನೇ ಬೆಚ್ಚಿ ಬೀಳಿಸುತ್ತದೆ. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವಾ ಎಂಬ ಪ್ರಶ್ನೆ ಕಾಡುತ್ತದೆ. ಇನ್ನು ಈ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣರೆಡ್ಡಿ ಪಕ್ಷದ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.
ವಿಚಾರಣೆ ನೆಪದಲ್ಲಿ ಯುವಕನನ್ನು ಕರೆತಂದು ವಿಕೃತವಾಗಿ ಹಲ್ಲೆ ಮಾಡುವ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಮಾನವ ಹಕ್ಕು ಅಯೋಗದ ಸದಸ್ಯ ಆರ್.ಕೆ. ದತ್ತಾ ಅವರು, ''ಹೆಬ್ಬಗೋಡಿ ಪೊಲೀಸರು ಹಲ್ಲೆ ಮಾಡುವ ಈ ಕೃತ್ಯದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಡಾ. ಕೋನಾ ವಂಶಿ ಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Youth brutally beaten by Police constable of Hebbagodi Police station Human right case registered. The video of their has gone viral on social media.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 08:46 pm
Mangalore Correspondent
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am