ಬ್ರೇಕಿಂಗ್ ನ್ಯೂಸ್
10-09-20 01:28 pm Headline Karnataka News Network ಕ್ರೈಂ
ಚೆನ್ನೈ, ಸೆಪ್ಟೆಂಬರ್ 10: ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬಿಸಿನೆಸ್ ಮ್ಯಾನ್ ಒಬ್ಬ ತನಗೆ ನಾಲ್ಕು ಕೋಟಿ ರೂಪಾಯಿ ವಂಚನೆ ಎಸಗಿದ್ದಾಗಿ ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಹರ್ಭಜನ್ ಸಿಂಗ್ ಸದ್ಯಕ್ಕೆ ಚೆನ್ನೈನಲ್ಲಿ ತಂಡದ ಪರವಾಗಿ ಅಭ್ಯಾಸ ನಿರತರಾಗಿದ್ದಾರೆ. 2015ರಲ್ಲಿ ಚೆನ್ನೈನ ಜುಹು ಬೀಚ್ ನಲ್ಲಿ ವಿಹಾರ ಸಂದರ್ಭ ಪರಿಚಯ ಆಗಿದ್ದ ಜಿ. ಮಹೇಶ್ ಎನ್ನುವಾತ ಅನಂತರ ಗೆಳೆತನ ಸಂಪಾದಿಸಿದ್ದ. ಆಬಳಿಕ ಸಾಲದ ರೂಪದಲ್ಲಿ ಹಣ ಪಡೆದಿದ್ದು ಮತ್ತೆ ಹಿಂತಿರುಗಿಸಿಲ್ಲ. ಮಹೇಶ್ ನನ್ನು ಆಬಳಿಕ ಸಂಪರ್ಕಿಸಲು ಯತ್ನಿಸಿದಾಗ ತಪ್ಪಿಸುತ್ತಿದ್ದಾನೆ. ಕಳೆದ ಆಗಸ್ಟ್ 18ರಂದು 25 ಲಕ್ಷ ರೂಪಾಯಿ ಚೆಕ್ ನೀಡಿದ್ದ. ಆದರೆ ಚೆಕ್ ಖಾತೆಯಲ್ಲಿ ಹಣ ಇಲ್ಲದೆ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಹರ್ಭಜನ್ ತಿಳಿಸಿದ್ದಾರೆ.

ಇತ್ತೀಚೆಗೆ ಚೆನ್ನೈ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದ ಹರ್ಭಜನ್ ಸಿಂಗ್, ಮಹೇಶ್ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ತನಿಖೆ ಆರಂಭಿಸಿದ್ದು ಮಹೇಶ್ ನನ್ನು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಾಜರಾಗುವ ಬದಲು ಮಹೇಶ್ ಮದ್ರಾಸ್ ಹೈಕೋರ್ಟ್ ಕದ ತಟ್ಟಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ಮಹೇಶ್ ಕೋರ್ಟಿಗೆ ಸಲ್ಲಿಕೆ ಮಾಡಿದ ಅಫಿಡವಿಟಲ್ಲಿ ಹರ್ಭಜನ್ ಸಿಂಗ್ ಬಳಿ ಹಣ ಸಾಲ ತೆಗೆದುಕೊಳ್ಳುವ ಸಂದರ್ಭ ತಾಲಂಬೂರಿನಲ್ಲಿರುವ ಜಾಗವನ್ನು ಅಡವು ಇಟ್ಟಿದ್ದೆ. ಆನಂತರ ಪವರ್ ಆಫ್ ಅಟಾರ್ನಿ ಡೀಡ್ ಕೂಡ ಹರ್ಭಜನ್ ಪರವಾಗಿ ನೀಡಿದ್ದೇನೆ. ತಿರುಪೂರ್ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಈ ಬಗ್ಗೆ ರಿಜಿಸ್ಟರ್ ಮಾಡಿಕೊಂಡಿರುವ ದಾಖಲೆ ಹೊಂದಿದ್ದೇನೆ. ಅಲ್ಲದೆ ಉಳಿದ ಹಣವನ್ನೂ ಪೂರ್ತಿಯಾಗಿ ಹಿಂತಿರುಗಿಸಿದ್ದೇನೆ ಎಂದು ಮಹೇಶ್ ತಿಳಿಸಿದ್ದಾನೆ.
Join our WhatsApp group for latest news updates
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm