ಬ್ರೇಕಿಂಗ್ ನ್ಯೂಸ್
10-09-20 01:28 pm Headline Karnataka News Network ಕ್ರೈಂ
ಚೆನ್ನೈ, ಸೆಪ್ಟೆಂಬರ್ 10: ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬಿಸಿನೆಸ್ ಮ್ಯಾನ್ ಒಬ್ಬ ತನಗೆ ನಾಲ್ಕು ಕೋಟಿ ರೂಪಾಯಿ ವಂಚನೆ ಎಸಗಿದ್ದಾಗಿ ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಹರ್ಭಜನ್ ಸಿಂಗ್ ಸದ್ಯಕ್ಕೆ ಚೆನ್ನೈನಲ್ಲಿ ತಂಡದ ಪರವಾಗಿ ಅಭ್ಯಾಸ ನಿರತರಾಗಿದ್ದಾರೆ. 2015ರಲ್ಲಿ ಚೆನ್ನೈನ ಜುಹು ಬೀಚ್ ನಲ್ಲಿ ವಿಹಾರ ಸಂದರ್ಭ ಪರಿಚಯ ಆಗಿದ್ದ ಜಿ. ಮಹೇಶ್ ಎನ್ನುವಾತ ಅನಂತರ ಗೆಳೆತನ ಸಂಪಾದಿಸಿದ್ದ. ಆಬಳಿಕ ಸಾಲದ ರೂಪದಲ್ಲಿ ಹಣ ಪಡೆದಿದ್ದು ಮತ್ತೆ ಹಿಂತಿರುಗಿಸಿಲ್ಲ. ಮಹೇಶ್ ನನ್ನು ಆಬಳಿಕ ಸಂಪರ್ಕಿಸಲು ಯತ್ನಿಸಿದಾಗ ತಪ್ಪಿಸುತ್ತಿದ್ದಾನೆ. ಕಳೆದ ಆಗಸ್ಟ್ 18ರಂದು 25 ಲಕ್ಷ ರೂಪಾಯಿ ಚೆಕ್ ನೀಡಿದ್ದ. ಆದರೆ ಚೆಕ್ ಖಾತೆಯಲ್ಲಿ ಹಣ ಇಲ್ಲದೆ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಹರ್ಭಜನ್ ತಿಳಿಸಿದ್ದಾರೆ.

ಇತ್ತೀಚೆಗೆ ಚೆನ್ನೈ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದ ಹರ್ಭಜನ್ ಸಿಂಗ್, ಮಹೇಶ್ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ತನಿಖೆ ಆರಂಭಿಸಿದ್ದು ಮಹೇಶ್ ನನ್ನು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಾಜರಾಗುವ ಬದಲು ಮಹೇಶ್ ಮದ್ರಾಸ್ ಹೈಕೋರ್ಟ್ ಕದ ತಟ್ಟಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ಮಹೇಶ್ ಕೋರ್ಟಿಗೆ ಸಲ್ಲಿಕೆ ಮಾಡಿದ ಅಫಿಡವಿಟಲ್ಲಿ ಹರ್ಭಜನ್ ಸಿಂಗ್ ಬಳಿ ಹಣ ಸಾಲ ತೆಗೆದುಕೊಳ್ಳುವ ಸಂದರ್ಭ ತಾಲಂಬೂರಿನಲ್ಲಿರುವ ಜಾಗವನ್ನು ಅಡವು ಇಟ್ಟಿದ್ದೆ. ಆನಂತರ ಪವರ್ ಆಫ್ ಅಟಾರ್ನಿ ಡೀಡ್ ಕೂಡ ಹರ್ಭಜನ್ ಪರವಾಗಿ ನೀಡಿದ್ದೇನೆ. ತಿರುಪೂರ್ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಈ ಬಗ್ಗೆ ರಿಜಿಸ್ಟರ್ ಮಾಡಿಕೊಂಡಿರುವ ದಾಖಲೆ ಹೊಂದಿದ್ದೇನೆ. ಅಲ್ಲದೆ ಉಳಿದ ಹಣವನ್ನೂ ಪೂರ್ತಿಯಾಗಿ ಹಿಂತಿರುಗಿಸಿದ್ದೇನೆ ಎಂದು ಮಹೇಶ್ ತಿಳಿಸಿದ್ದಾನೆ.
Join our WhatsApp group for latest news updates
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm