ಬ್ರೇಕಿಂಗ್ ನ್ಯೂಸ್
29-09-21 05:50 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಹಣಕ್ಕಾಗಿ ವಕೀಲರೊಬ್ಬರನ್ನು ಅಪಹರಿಸಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ಡರ್, ಫೈನಾನ್ಷಿಯರ್, ಐಟಿ ಕಂಪನಿ ಮಾಲೀಕ, ಗ್ಯಾಂಗ್ ಆರ್ಟಿಸ್ಟ್ ಮತ್ತು ಬೌನ್ಸರ್ಗಳು ಸೇರಿದಂತೆ 9 ಮಂದಿಯ ಗ್ಯಾಂಗ್ ಅನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿಗಳರ ಪಾಳ್ಯ ಕರಿಹೋಬನಹಳ್ಳಿ ವಾಸಿ ಸಿದ್ದೇಶ್ (31), ಡಾಲರ್ಸ್ ಕಾಲೋನಿ 2ನೆ ಮೈನ್ ವಾಸಿ ವಿಜಯ್ಕುಮಾರ್.ಜಿ (33), ಬೊಮ್ಮನಹಳ್ಳಿ ನಿವಾಸಿ ಸಂಜಯ್.ಎಸ್ ಅಲಿಯಾಸ್ ಸಂಜು (27), ಶಾಂತಿಪ್ರಿಯ ಲೇಔಟ್ನ ನೆಲ್ಸನ್ಕುಮಾರ್.ಎಫ್ ಅಲಿಯಾಸ್ ನೆಲ್ಸನ್ (23), ಕತ್ರಿಗುಪ್ಪೆಯ ಯುಗಾನಂದ್.ಜಿ (22), ಬೆಟ್ಟಹಳ್ಳಿ ಲೇಔಟ್ ವಾಸಿ ನರೇಶ್ (30), ಜಗಜೀವನರಾಂ ನಗರದ ಅರುಣ್ಕುಮಾರ್.ಎಲ್ ಅಲಿಯಾಸ್ ಅರುಣ (29), ನ್ಯೂ ಗುಡ್ಡದಹಳ್ಳಿಯ ಯುವರಾಜ್.ಆರ್ (31), ಚಿಕ್ಕಮಧುರೆ ಗ್ರಾಮದ ಅಶೋಕ.ಕೆ(31) ಬಂತ ಆರೋಪಿಗಳು.
ನಾಗರಬಾವಿ ಮುಖ್ಯರಸ್ತೆ ಸ್ವಾತಿ ಹೊಟೇಲ್ ಬಳಿ ಸೆಪ್ಟೆಂಬರ್ 20 ರಂದು ಬೆಳಗ್ಗೆ 11.30ರ ಸಮಯದಲ್ಲಿ ವಕೀಲರಾದ ಅಭಯ್ ಆರ್. ಕುಲಕರ್ಣಿ ಎಂಬುವವರನ್ನು ಹಣಕಾಸಿನ ವಿಚಾರಕ್ಕೆ ಈ ಆರೋಪಿಗಳು 2 ಫಾಚ್ರ್ಯೂನರ್ ಕಾರುಗಳಲ್ಲಿ ಬಂದು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದರು.
ನಂತರ ಮೊಬೈಲ್ ಮೂಲಕ ಅಭಯ್ ಆರ್.ಕುಲಕರ್ಣಿ ಅವರ ತಮ್ಮ ವರುಣ್ ಆರ್.ಕುಲಕರ್ಣಿ ಎಂಬುವವರಿಗೆ ಕರೆ ಮಾಡಿ 30 ಲಕ್ಷ ರೂ. ಹಣ ಕೊಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಬಂಧನದಲ್ಲಿಟ್ಟಿದ್ದ ವ್ಯಕ್ತಿಗೆ ಹಾಕಿ ಸ್ಟಿಕ್ ಹಾಗೂ ಕೈಮುಷ್ಠಿಯಿಂದ ಗುದ್ದಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದರು.
ಈ ಸಂಬಂಧ ವರುಣ್ ಆರ್.ಕುಲಕರ್ಣಿ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ 2 ಬಿಳಿ ಬಣ್ಣದ ಫಾಚ್ರ್ಯೂನರ್ ಕಾರು, 1 ಹಾಕಿ ಸ್ಟಿಕ್, 9 ವಿವಿಧ ಕಂಪೆನಿಗಳ ಮೊಬೈಲ್ ಫೆಪೊನ್ಗಳನ್ನು ವಶಪಡಿಸಿಕೊಂಡು ಅಪಹರಣಕ್ಕೊಳಕಾಗಿದ್ದ ವಕೀಲರನ್ನು ಪೊಲೀಸರು ರಕ್ಷಿಸಿದ್ದಾರೆ.
ಬೆಂಗಳೂರು ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ಡಾ.ಸಂಜೀವ್ ಎಂ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕಪೊಲೀಸ್ ಕಮೀಷನರ್ ಯು.ಡಿ.ಕೃಷ್ಣಕುಮಾರ್ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿ ಠಾಣೆ ಇನ್ಸ್ಪೆಕ್ಟರ್ ಲೋಹಿತ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
Bengaluru Kidnap Lawyer Kidnap Bengaluru Police Stunt Actors Sandalwood
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 07:49 pm
Mangalore Correspondent
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm