ಬ್ರೇಕಿಂಗ್ ನ್ಯೂಸ್
29-09-21 05:50 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಹಣಕ್ಕಾಗಿ ವಕೀಲರೊಬ್ಬರನ್ನು ಅಪಹರಿಸಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ಡರ್, ಫೈನಾನ್ಷಿಯರ್, ಐಟಿ ಕಂಪನಿ ಮಾಲೀಕ, ಗ್ಯಾಂಗ್ ಆರ್ಟಿಸ್ಟ್ ಮತ್ತು ಬೌನ್ಸರ್ಗಳು ಸೇರಿದಂತೆ 9 ಮಂದಿಯ ಗ್ಯಾಂಗ್ ಅನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿಗಳರ ಪಾಳ್ಯ ಕರಿಹೋಬನಹಳ್ಳಿ ವಾಸಿ ಸಿದ್ದೇಶ್ (31), ಡಾಲರ್ಸ್ ಕಾಲೋನಿ 2ನೆ ಮೈನ್ ವಾಸಿ ವಿಜಯ್ಕುಮಾರ್.ಜಿ (33), ಬೊಮ್ಮನಹಳ್ಳಿ ನಿವಾಸಿ ಸಂಜಯ್.ಎಸ್ ಅಲಿಯಾಸ್ ಸಂಜು (27), ಶಾಂತಿಪ್ರಿಯ ಲೇಔಟ್ನ ನೆಲ್ಸನ್ಕುಮಾರ್.ಎಫ್ ಅಲಿಯಾಸ್ ನೆಲ್ಸನ್ (23), ಕತ್ರಿಗುಪ್ಪೆಯ ಯುಗಾನಂದ್.ಜಿ (22), ಬೆಟ್ಟಹಳ್ಳಿ ಲೇಔಟ್ ವಾಸಿ ನರೇಶ್ (30), ಜಗಜೀವನರಾಂ ನಗರದ ಅರುಣ್ಕುಮಾರ್.ಎಲ್ ಅಲಿಯಾಸ್ ಅರುಣ (29), ನ್ಯೂ ಗುಡ್ಡದಹಳ್ಳಿಯ ಯುವರಾಜ್.ಆರ್ (31), ಚಿಕ್ಕಮಧುರೆ ಗ್ರಾಮದ ಅಶೋಕ.ಕೆ(31) ಬಂತ ಆರೋಪಿಗಳು.

ನಾಗರಬಾವಿ ಮುಖ್ಯರಸ್ತೆ ಸ್ವಾತಿ ಹೊಟೇಲ್ ಬಳಿ ಸೆಪ್ಟೆಂಬರ್ 20 ರಂದು ಬೆಳಗ್ಗೆ 11.30ರ ಸಮಯದಲ್ಲಿ ವಕೀಲರಾದ ಅಭಯ್ ಆರ್. ಕುಲಕರ್ಣಿ ಎಂಬುವವರನ್ನು ಹಣಕಾಸಿನ ವಿಚಾರಕ್ಕೆ ಈ ಆರೋಪಿಗಳು 2 ಫಾಚ್ರ್ಯೂನರ್ ಕಾರುಗಳಲ್ಲಿ ಬಂದು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದರು.
ನಂತರ ಮೊಬೈಲ್ ಮೂಲಕ ಅಭಯ್ ಆರ್.ಕುಲಕರ್ಣಿ ಅವರ ತಮ್ಮ ವರುಣ್ ಆರ್.ಕುಲಕರ್ಣಿ ಎಂಬುವವರಿಗೆ ಕರೆ ಮಾಡಿ 30 ಲಕ್ಷ ರೂ. ಹಣ ಕೊಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಬಂಧನದಲ್ಲಿಟ್ಟಿದ್ದ ವ್ಯಕ್ತಿಗೆ ಹಾಕಿ ಸ್ಟಿಕ್ ಹಾಗೂ ಕೈಮುಷ್ಠಿಯಿಂದ ಗುದ್ದಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದರು.

ಈ ಸಂಬಂಧ ವರುಣ್ ಆರ್.ಕುಲಕರ್ಣಿ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ 2 ಬಿಳಿ ಬಣ್ಣದ ಫಾಚ್ರ್ಯೂನರ್ ಕಾರು, 1 ಹಾಕಿ ಸ್ಟಿಕ್, 9 ವಿವಿಧ ಕಂಪೆನಿಗಳ ಮೊಬೈಲ್ ಫೆಪೊನ್ಗಳನ್ನು ವಶಪಡಿಸಿಕೊಂಡು ಅಪಹರಣಕ್ಕೊಳಕಾಗಿದ್ದ ವಕೀಲರನ್ನು ಪೊಲೀಸರು ರಕ್ಷಿಸಿದ್ದಾರೆ.
ಬೆಂಗಳೂರು ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ಡಾ.ಸಂಜೀವ್ ಎಂ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕಪೊಲೀಸ್ ಕಮೀಷನರ್ ಯು.ಡಿ.ಕೃಷ್ಣಕುಮಾರ್ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿ ಠಾಣೆ ಇನ್ಸ್ಪೆಕ್ಟರ್ ಲೋಹಿತ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
Bengaluru Kidnap Lawyer Kidnap Bengaluru Police Stunt Actors Sandalwood
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm