ಬ್ರೇಕಿಂಗ್ ನ್ಯೂಸ್
10-09-20 04:30 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡಾಕ್ಟರ್ ಅಜೀಜ್ ಪಾಷಾ ಜತೆ ನಟಿ ಸಂಜನಾ ಗಲ್ರಾನಿ ಮದುವೆ ಆಗಿದ್ದಾರಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಫೋಟೋವೊಂದು ವೈರಲ್ ಆಗಿದೆ.
ನನಗಿನ್ನೂ ಮದುವೆ ಆಗಿಲ್ಲ ಎಂದು ಸಂಜನಾ ಹೇಳುತ್ತಿದ್ದರು. ಡ್ರಗ್ಸ್ ಕೇಸ್ನಲ್ಲಿ ಸಂಜನಾ, ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಪಡುತ್ತಿದ್ದಂತೆ ಅವರ ಮದುವೆ ಕುರಿತಾಗಿ ತರಹೇವಾರಿ ಬಿಸಿಬಿಸಿ ಸುದ್ದಿಗಳು ಹರಿದಾಡಿತ್ತು. ಸಂಜನಾ ಮತ್ತು ಅಜೀಜ್ ಪಾಷಾ ಇಬ್ಬರೂ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದರು ಎಂಬ ಸುದ್ದಿಯೂ ಹಬ್ಬಿತ್ತು. ಇದೀಗ ಅವರಿಬ್ಬರೂ ಮದುಮಕ್ಕಳ ಉಡುಗೆತೊಟ್ಟು ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ವೈರಲ್ ಆಗಿದೆ.
ಡ್ರಗ್ಸ್ ಮಾಫಿಯಾದಲ್ಲಿ ಸಂಜನಾ ಇರುವುದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಿಡಿಕಾರಿದ್ದರು. ತನ್ನ ಹೆಸರನ್ನು ಡ್ರಗ್ಸ್ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಕ್ಕೆ ಮೂರು ದಿನಗಳ ಹಿಂದಷ್ಟೇ ಪ್ರಶಾಂತ್ ಸಂಬರಗಿ ವಿರುದ್ಧ ಮಾಧ್ಯಮಗಳ ಮುಂದೆ ಕೆಂಡಾಮಂಡಲವಾದ ನಟಿ ಸಂಜನಾ, ‘ನಾನಿನ್ನೂ ಮದುವೆ ಆಗಿಲ್ಲ. ಮದುವೆ ಆಗದ ಹೆಣ್ಣುಮಗಳ ಬಗ್ಗೆ ಹೀಗೆಲ್ಲ ಮಾತಾಡೋದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದರು. ಬಳಿಕ ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ಡಾ.ಅಜೀಜ್ ಪಾಷಾ ಜತೆ ಸಂಜನಾ ಆಪ್ತತೆ, ಸಂಜನಾ ಪಾಲ್ಗೊಳ್ಳುತ್ತಿದ್ದ ಎಲ್ಲ ಪಾರ್ಟಿಯಲ್ಲೂ ಆ ವೈದ್ಯ ಪಾಲ್ಗೊಳ್ಳುತ್ತಿದ್ದರು ಎಂಬುದರ ಬಗ್ಗೆಯೂ ಸುದ್ದಿಯಾಗಿತ್ತು. ಇದೀಗ ಅವರಿಬ್ಬರೂ ಮದುವೆ ಆಗಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗಿದ್ದು, ಹಲವು ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಬಹುಭಾಷಾ ನಟಿ ಸಂಜನಾ ಗಲ್ರಾನಿ ವೈದ್ಯ ಅಜೀಜ್ ಪಾಷಾರನ್ನು ಗುಪ್ತವಾಗಿ ಮದುವೆ ಆಗಿದ್ದಾರಾ? ಎಂಬ ಚರ್ಚೆ ಎಲ್ಲೆಡೆ ಆಗುತ್ತಿದೆ. ಗಂಡನ ಬಗ್ಗೆ ಸಂಜನಾ ಯಾಕೆ ವಿಷಯ ಮುಚ್ಚಿಟ್ಟಿದ್ರು, ತಾನು ಇನ್ನೂ ಮದುವೆಯನ್ನೇ ಆಗಿಲ್ಲ ಎಂದಿದ್ದೇಕೆ? ಇದರ ಹಿಂದಿನ ಉದ್ದೇಶವೇನು? ರಿಯಲ್ ಗಂಡನ ಬಗ್ಗೆ ರೀಲ್ ಬಿಟ್ಟಿದ್ಯಾಕೆ? ಎಂದು ಅಭಿಮಾನಿಗಳು, ನೆಟ್ಟಿಗರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಈ ಫೋಟೋ ಅಸಲಿಯತ್ತಿನ ಬಗ್ಗೆ ಸ್ವತಃ ನಟಿಯೇ ಉತ್ತರಿಸಬೇಕಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm