ಬ್ರೇಕಿಂಗ್ ನ್ಯೂಸ್
01-10-21 08:06 pm Mangaluru Correspondent ಕ್ರೈಂ
ಉಳ್ಳಾಲ, ಅ.1: ಕಳೆದ ವಾರವಷ್ಟೇ ಅಪರಿಚಿತ ವ್ಯಕ್ತಿಯೊಬ್ಬ ಸೋಮೇಶ್ವರದ ಮನೆ, ಮನೆಗಳಿಗೆ ಕ್ರೈಸ್ತ ಧರ್ಮ ಪ್ರಚಾರದ ಕರಪತ್ರಗಳನ್ನ ಹಂಚಿದ ಪ್ರಕರಣ ನಡೆದಿದ್ದು ಇದರ ಬೆನ್ನಲ್ಲೇ ಇಂದು ತೊಕ್ಕೊಟ್ಟಿನ ಮನೆಗಳಿಗೂ ವ್ಯಕ್ತಿಯೋರ್ವ ಅಂತಹದೇ ಕರಪತ್ರಗಳನ್ನ ಹಂಚಿದ್ದಾನೆ.
ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ವಿನಮ್ರ ಬಾರಿನ ಪಕ್ಕದ ಕಿರು ರಸ್ತೆಯಲ್ಲಿರುವ ಆರು ಮನೆಗಳಿಗೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನ ಹಂಚಿದ್ದಾನೆ. ಸ್ಥಳೀಯರಾದ ದಯಾನಂದ್ ಎಂಬವರ ಮನೆಗೇಟಲ್ಲಿ ಅಪರಿಚಿತ ವ್ಯಕ್ತಿ ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿದ್ದು ಅದನ್ನು ಕಿತ್ತೆಸೆದು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕರಪತ್ರ, ಪುಸ್ತಕಗಳನ್ನ ವಶಕ್ಕೆ ಪಡೆದಿದ್ದಾರೆ.
ಹೆಗಲಿಗೆ ಬ್ಯಾಗ್ ಹಾಕಿದ್ದ ಸುಮಾರು 45 ವರ್ಷದ ವ್ಯಕ್ತಿಯೋರ್ವ ಕರಪತ್ರ, ಪುಸ್ತಕಗಳನ್ನ ಗೇಟಲ್ಲಿ ಇರಿಸಿದ್ದಾನೆಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ, ವಿಚಾರವನ್ನ ಬಜರಂಗದಳದ ಪ್ರಮುಖರಿಗೂ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿ ತೊಕ್ಕೊಟ್ಟು ಪರಿಸರದ ಇನ್ನಷ್ಟು ಮನೆಗಳಿಗೆ ಕರಪತ್ರಗಳನ್ನು ಹಂಚಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರು ಸಂಶಯ ವ್ಯಕ್ತಪಡಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ವಾರ ಸೆ.24ರಂದು ಸೋಮೇಶ್ವರದ ರೈಲ್ವೇ ನಿಲ್ದಾಣದ ಹಿಂದಿನ ಬೀಚ್ ರಸ್ತೆಯ ಮನೆಗಳ ಗೇಟ್ ಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆ ನಮೂದಿಸಿದ ಕನ್ನಡ, ಮಳಯಾಲಂನಲ್ಲಿ ಮುದ್ರಿತ ಕರಪತ್ರ, ಪುಸ್ತಕ, ಸ್ಟಿಕ್ಕರ್ ಗಳನ್ನ ಅಪರಿಚಿತನೊಬ್ಬ ಇರಿಸಿ ಹೋಗಿದ್ದ. ಬಜರಂಗದಳ ಕಾರ್ಯಕರ್ತರು ಕರಪತ್ರ ಹಂಚಿದ್ದ ವ್ಯಕ್ತಿಯ ಶೋಧ ಕಾರ್ಯವನ್ನೂ ನಡೆಸಿದ್ದರು.
ಇಂದು ಅದೇ ರೀತಿಯ ಪುಸ್ತಕ, ಕರಪತ್ರಗಳನ್ನು ತೊಕ್ಕೊಟ್ಟಿನ ಪರಿಸರದ ಮನೆಗಳ ಗೇಟ್ ಗಳಲ್ಲಿ ಇರಿಸಲಾಗಿದೆ. ಘಟನೆ ಕುರಿತಂತೆ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಅಪರಿಚಿತ ವ್ಯಕ್ತಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.
ಸೋಮೇಶ್ವರ ; ಮನೆ, ಮನೆಗೆ ಕ್ರೈಸ್ತ ಧರ್ಮ ಪ್ರಚೋದಿತ ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ! ಬಜರಂಗದಳ ಕಾರ್ಯಕರ್ತರ ಆಕ್ರೋಶ
Christian Letters, Bible, and Magazine found at outside homes in Thokottu after Someshwara VHP demands arrest. Recently the same were found in houses at Someshwara.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm