ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm