ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm