ಬ್ರೇಕಿಂಗ್ ನ್ಯೂಸ್
04-10-21 11:00 am Headline Karnataka News Network ಕ್ರೈಂ
ಮುಂಬೈ, ಅ.4 : ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರನ ಬಂಧನ. ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಎನ್ಸಿಬಿಯು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದೆ. ಮುಂಬೈನಲ್ಲಿ ಕ್ರೂಸ್ ಶಿಪ್ ಒಂದರ ಮೇಲೆ ನಿನ್ನೆ ರಾತ್ರಿ ಎನ್ಸಿಬಿ ಹಾಗೂ ಮುಂಬೈ ಪೊಲೀಸರು ದಾಳಿ ನಡೆಸಿದ್ದರು. ಆ ಕ್ರೂಸ್ ಶಿಪ್ ಪಾರ್ಟಿಯಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಸಹ ಇದ್ದರು. ಆರ್ಯನ್ ಹಾಗೂ ಇತರ 8 ಮಂದಿಯನ್ನು ನಿನ್ನೆಯೇ ವಶಕ್ಕೆ ಪಡೆದಿದ್ದ ಎನ್ಸಿಬಿ ಇಂದು ಬಂಧಿಸಿದೆ.
ಹಲವು ಗಂಟೆಗಳ ವಿಚಾರಣೆ ಬಳಿಕ ಇಂದು ಮಧ್ಯಾಹ್ನದ ಬಳಿಕ ಆರ್ಯನ್ ಅನ್ನು ಬಂಧಿಸಲಾಗಿದ್ದು, ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಾಳೆ ಆರ್ಯನ್ ಹಾಗೂ ಇತರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಆರ್ಯನ್ ಪರ ವಕೀಲ ಸತೀಶ್ ಮಾನೆಶಿಂಧೆ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ.




ಆರ್ಯನ್ ಅನ್ನು ನಿನ್ನೆಯೇ ಪೊಲೀಸರು ವಶಕ್ಕೆ ಪಡೆದು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆರ್ಯನ್ನ ಮೊಬೈಲ್ ಮಾಹಿತಿಗಳನ್ನು ಸಹ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಡ್ರಗ್ಸ್ ಜಾಲದೊಂದಿಗೆ ಆರ್ಯನ್ಗೆ ಸಂಪರ್ಕವಿದೆಯಂದು ತಿಳಿದು ಬಂದಿದೆ.
ಆರ್ಯನ್ ಹಾಗೂ ಇತರರ ವಿಚಾರಣೆ ನಡೆವ ವೇಳೆಯೇ ಮುಂಬೈ ಎನ್ಸಿಬಿ ಕಚೇರಿಗೆ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಎನ್ಸಿಬಿ ಸಿಬ್ಬಂದಿ ಕರೆತಂದರು. ಅದೇ ವ್ಯಕ್ತಿ ನಿನ್ನೆ ನಡೆದ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದ್ದ ಎನ್ನಲಾಗುತ್ತಿದೆ. ಎನ್ಡಿಪಿಎಸ್ ಸೆಕ್ಷನ್ 27ರ ಅನ್ವಯ ಆರ್ಯನ್ ಅನ್ನು ಬಂಧಿಸಲಾಗಿದ್ದು, ಆರ್ಯನ್ ಜೊತೆಗೆ ಮೂವರನ್ನು ಸಹ ಬಂಧಿಸಲಾಗಿದೆ. ಅರ್ಬಾಜ್ ಖಾನ್ ಹಾಗೂ ಮುನ್-ಮುನ್ ಧಮೇಚ್ಛ ಸಹ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರ ಜೊತೆಗೆ ಮಹಿಳೆಯೊಬ್ಬರು ಸಹ ಇದ್ದಾರೆ ಎನ್ನಲಾಗುತ್ತಿದೆ. ಬಂಧಿತರಿಗೆ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದೆ. ಇಂದೇ ಈ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
On October 2, the NCB busted a rave party on the Cordelia cruise ship and detained 8 persons. Shah Rukh Khan's son Aryan Khan is among those being questioned in the Mumbai cruise drug bust case.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm