ಬ್ರೇಕಿಂಗ್ ನ್ಯೂಸ್
04-10-21 11:00 am Headline Karnataka News Network ಕ್ರೈಂ
ಮುಂಬೈ, ಅ.4 : ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರನ ಬಂಧನ. ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಎನ್ಸಿಬಿಯು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದೆ. ಮುಂಬೈನಲ್ಲಿ ಕ್ರೂಸ್ ಶಿಪ್ ಒಂದರ ಮೇಲೆ ನಿನ್ನೆ ರಾತ್ರಿ ಎನ್ಸಿಬಿ ಹಾಗೂ ಮುಂಬೈ ಪೊಲೀಸರು ದಾಳಿ ನಡೆಸಿದ್ದರು. ಆ ಕ್ರೂಸ್ ಶಿಪ್ ಪಾರ್ಟಿಯಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಸಹ ಇದ್ದರು. ಆರ್ಯನ್ ಹಾಗೂ ಇತರ 8 ಮಂದಿಯನ್ನು ನಿನ್ನೆಯೇ ವಶಕ್ಕೆ ಪಡೆದಿದ್ದ ಎನ್ಸಿಬಿ ಇಂದು ಬಂಧಿಸಿದೆ.
ಹಲವು ಗಂಟೆಗಳ ವಿಚಾರಣೆ ಬಳಿಕ ಇಂದು ಮಧ್ಯಾಹ್ನದ ಬಳಿಕ ಆರ್ಯನ್ ಅನ್ನು ಬಂಧಿಸಲಾಗಿದ್ದು, ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಾಳೆ ಆರ್ಯನ್ ಹಾಗೂ ಇತರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಆರ್ಯನ್ ಪರ ವಕೀಲ ಸತೀಶ್ ಮಾನೆಶಿಂಧೆ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ.




ಆರ್ಯನ್ ಅನ್ನು ನಿನ್ನೆಯೇ ಪೊಲೀಸರು ವಶಕ್ಕೆ ಪಡೆದು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆರ್ಯನ್ನ ಮೊಬೈಲ್ ಮಾಹಿತಿಗಳನ್ನು ಸಹ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಡ್ರಗ್ಸ್ ಜಾಲದೊಂದಿಗೆ ಆರ್ಯನ್ಗೆ ಸಂಪರ್ಕವಿದೆಯಂದು ತಿಳಿದು ಬಂದಿದೆ.
ಆರ್ಯನ್ ಹಾಗೂ ಇತರರ ವಿಚಾರಣೆ ನಡೆವ ವೇಳೆಯೇ ಮುಂಬೈ ಎನ್ಸಿಬಿ ಕಚೇರಿಗೆ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಎನ್ಸಿಬಿ ಸಿಬ್ಬಂದಿ ಕರೆತಂದರು. ಅದೇ ವ್ಯಕ್ತಿ ನಿನ್ನೆ ನಡೆದ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದ್ದ ಎನ್ನಲಾಗುತ್ತಿದೆ. ಎನ್ಡಿಪಿಎಸ್ ಸೆಕ್ಷನ್ 27ರ ಅನ್ವಯ ಆರ್ಯನ್ ಅನ್ನು ಬಂಧಿಸಲಾಗಿದ್ದು, ಆರ್ಯನ್ ಜೊತೆಗೆ ಮೂವರನ್ನು ಸಹ ಬಂಧಿಸಲಾಗಿದೆ. ಅರ್ಬಾಜ್ ಖಾನ್ ಹಾಗೂ ಮುನ್-ಮುನ್ ಧಮೇಚ್ಛ ಸಹ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರ ಜೊತೆಗೆ ಮಹಿಳೆಯೊಬ್ಬರು ಸಹ ಇದ್ದಾರೆ ಎನ್ನಲಾಗುತ್ತಿದೆ. ಬಂಧಿತರಿಗೆ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದೆ. ಇಂದೇ ಈ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
On October 2, the NCB busted a rave party on the Cordelia cruise ship and detained 8 persons. Shah Rukh Khan's son Aryan Khan is among those being questioned in the Mumbai cruise drug bust case.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm