ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm