ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm