ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm