ಬ್ರೇಕಿಂಗ್ ನ್ಯೂಸ್
07-10-21 12:23 pm Mangaluru Correspondent ಕ್ರೈಂ
ಉಳ್ಳಾಲ, ಅ.7: ರಬ್ಬರ್ ತೋಟದ ನಡುವಲ್ಲಿರುವ ಒಂಟಿ ಬಂಗಲೆಗೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 5 ಹಿತ್ತಾಳೆಯ ದೀಪಗಳನ್ನ ಕದ್ದೊಯ್ದ ಘಟನೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಯಾರೂ ವಾಸವಿಲ್ಲದ ಒಂಟಿ ಬಂಗಲೆ ಮನೆಯ ಹಿಂಬಾಗಿಲನ್ನ ಪಿಕ್ಕಾಸಲ್ಲಿ ಮುರಿದು ಕಳ್ಳತನ ನಡೆಸಲಾಗಿದೆ. ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಬಂಗಲೆಯ ಕೋಣೆಯ ದೀಪ ಉರಿಯುವುದನ್ನ ಹತ್ತಿರದ ನಿವಾಸಿಯಾಗಿರುವ ಸುಜಾತ ಅವರ ಅಣ್ಣ ವಕೀಲ ಗಂಗಾಧರ್ ಉಳ್ಳಾಲ್ ಅವರು ಗಮಿನಿಸಿದ್ದು ಬಂಗಲೆಯೊಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಬಂಗಲೆಯ ಹಿಂಬಾಗಿಲಿನ ಬಳಿಯಲ್ಲೇ ಇದ್ದ ಪಿಕ್ಕಾಸಿನಲ್ಲಿ ಕಬ್ಬಿಣದ ಸಲಾಕೆಯ ಗೇಟನ್ನು ಮುರಿದು ಕಳ್ಳರು ಒಳ ಹೊಕ್ಕಿದ್ದಾರೆ. ಮನೆಯ ಹಾಲಲ್ಲಿದ್ದ ಎತ್ತರದ ಮೂರು ಹಿತ್ತಾಳೆಯ ದೀಪ ಮತ್ತು ದೇವರ ಕೋಣೆಯಲ್ಲಿದ್ದ ಎರಡು ಸಣ್ಣ ಹಿತ್ತಾಳೆಯ ದೀಪಗಳನ್ನ ಕದ್ದೊಯ್ದಿದ್ದಾರೆ. ಮನೆಯ ಕಪಾಟುಗಳನ್ನ ಕಳ್ಳರು ತಡಕಾಡಿದ್ದು ಮನೆಯೊಳಗೆ ಯಾವುದೇ ನಗ, ನಗದು ಸಿಗದೆ ದೀಪಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ನಿರ್ಜನ ಎಸ್ಟೇಟಲ್ಲಿ ಸಿಸಿ ಕ್ಯಾಮೆರಾ ವರ್ಕಿಂಗ್ ಇಲ್ಲ
ಬಬ್ಬಕಟ್ಟೆಯಿಂದ-ರಾಣಿಪುರ ಸಂಪರ್ಕದ ಒಳ ನಿರ್ಜನ ರಸ್ತೆಯ ನಡುವಲ್ಲಿ ಚಂದಪ್ಪ ಎಸ್ಟೇಟ್ ಇದ್ದು ಇಲ್ಲಿ ಉಳ್ಳಾಲ ನಗರಸಭೆ ಆಡಳಿತ ಹಾಕಿಸಿದ್ದ ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಇಂತಹ ನಿರ್ಜನ ಪ್ರದೇಶದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಕಳ್ಳತನ ನಡೆದ ಮನೆ ಮಾಲಕಿ ಸುಜಾತ ಅವರ ಸಹೋದರ ನಗರ ಸದಸ್ಯರಾದ ದಿನಕರ ಉಳ್ಳಾಲ್ ಆಗ್ರಹಿಸಿದ್ದಾರೆ.
Thokottu Burglars enter bungalow, FIve steal brass lamps worth lakhs have been stolen. Ullal police have visited the spot and are now investigating the case.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm