ಬ್ರೇಕಿಂಗ್ ನ್ಯೂಸ್
07-10-21 12:23 pm Mangaluru Correspondent ಕ್ರೈಂ
ಉಳ್ಳಾಲ, ಅ.7: ರಬ್ಬರ್ ತೋಟದ ನಡುವಲ್ಲಿರುವ ಒಂಟಿ ಬಂಗಲೆಗೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 5 ಹಿತ್ತಾಳೆಯ ದೀಪಗಳನ್ನ ಕದ್ದೊಯ್ದ ಘಟನೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಯಾರೂ ವಾಸವಿಲ್ಲದ ಒಂಟಿ ಬಂಗಲೆ ಮನೆಯ ಹಿಂಬಾಗಿಲನ್ನ ಪಿಕ್ಕಾಸಲ್ಲಿ ಮುರಿದು ಕಳ್ಳತನ ನಡೆಸಲಾಗಿದೆ. ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಬಂಗಲೆಯ ಕೋಣೆಯ ದೀಪ ಉರಿಯುವುದನ್ನ ಹತ್ತಿರದ ನಿವಾಸಿಯಾಗಿರುವ ಸುಜಾತ ಅವರ ಅಣ್ಣ ವಕೀಲ ಗಂಗಾಧರ್ ಉಳ್ಳಾಲ್ ಅವರು ಗಮಿನಿಸಿದ್ದು ಬಂಗಲೆಯೊಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಬಂಗಲೆಯ ಹಿಂಬಾಗಿಲಿನ ಬಳಿಯಲ್ಲೇ ಇದ್ದ ಪಿಕ್ಕಾಸಿನಲ್ಲಿ ಕಬ್ಬಿಣದ ಸಲಾಕೆಯ ಗೇಟನ್ನು ಮುರಿದು ಕಳ್ಳರು ಒಳ ಹೊಕ್ಕಿದ್ದಾರೆ. ಮನೆಯ ಹಾಲಲ್ಲಿದ್ದ ಎತ್ತರದ ಮೂರು ಹಿತ್ತಾಳೆಯ ದೀಪ ಮತ್ತು ದೇವರ ಕೋಣೆಯಲ್ಲಿದ್ದ ಎರಡು ಸಣ್ಣ ಹಿತ್ತಾಳೆಯ ದೀಪಗಳನ್ನ ಕದ್ದೊಯ್ದಿದ್ದಾರೆ. ಮನೆಯ ಕಪಾಟುಗಳನ್ನ ಕಳ್ಳರು ತಡಕಾಡಿದ್ದು ಮನೆಯೊಳಗೆ ಯಾವುದೇ ನಗ, ನಗದು ಸಿಗದೆ ದೀಪಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ನಿರ್ಜನ ಎಸ್ಟೇಟಲ್ಲಿ ಸಿಸಿ ಕ್ಯಾಮೆರಾ ವರ್ಕಿಂಗ್ ಇಲ್ಲ
ಬಬ್ಬಕಟ್ಟೆಯಿಂದ-ರಾಣಿಪುರ ಸಂಪರ್ಕದ ಒಳ ನಿರ್ಜನ ರಸ್ತೆಯ ನಡುವಲ್ಲಿ ಚಂದಪ್ಪ ಎಸ್ಟೇಟ್ ಇದ್ದು ಇಲ್ಲಿ ಉಳ್ಳಾಲ ನಗರಸಭೆ ಆಡಳಿತ ಹಾಕಿಸಿದ್ದ ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಇಂತಹ ನಿರ್ಜನ ಪ್ರದೇಶದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಕಳ್ಳತನ ನಡೆದ ಮನೆ ಮಾಲಕಿ ಸುಜಾತ ಅವರ ಸಹೋದರ ನಗರ ಸದಸ್ಯರಾದ ದಿನಕರ ಉಳ್ಳಾಲ್ ಆಗ್ರಹಿಸಿದ್ದಾರೆ.
Thokottu Burglars enter bungalow, FIve steal brass lamps worth lakhs have been stolen. Ullal police have visited the spot and are now investigating the case.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:00 pm
HK News Desk
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am