ಬ್ರೇಕಿಂಗ್ ನ್ಯೂಸ್
09-10-21 05:26 pm Mangalore Reporter ಕ್ರೈಂ
ಮಂಗಳೂರು, ಅ.9: ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವುದನ್ನು ಕೇಂದ್ರ ಇಂಟೆಲಿಜನ್ಸಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಕನೆಕ್ಟ್ ಆಗಿದ್ದು, ಕರಾವಳಿಯಲ್ಲಿ ಭಯೋತ್ಪಾದಕರೇ ಈ ಕೃತ್ಯದಲ್ಲಿ ತೊಡಗಿದ್ದಾರೆ ಎನ್ನುವ ಸಂಶಯ ಮೂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೂಡುಬಿದ್ರೆ ಮತ್ತು ಮುಡಿಪು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವ ಬಗ್ಗೆ ಲೊಕೇಶನ್ ಪತ್ತೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಎರಡು ಕಡೆಯಿಂದ ವಿದೇಶಕ್ಕೆ ಫೋನ್ ಸಂಪರ್ಕ ಆಗಿರುವುದನ್ನು ಐಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ಕಳುಹಿಸಲಾಗಿದ್ದು, ಸರಕಾರಿ ಏಜನ್ಸಿಗಳಿಗೆ ಚಳ್ಳೆಹಣ್ಣು ತಿನ್ನಿಸುವ ಕಳ್ಳರ ಜಾಡು ತಲೆನೋವಿಗೆ ಕಾರಣವಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಐದು ಕಡೆಯಿಂದ ವಿದೇಶಗಳಿಗೆ ಸ್ಯಾಟಲೈಟ್ ಫೋನ್ ಕನೆಕ್ಟ್ ಆಗಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ದೇಶದ್ರೋಹಿ ಚಟುವಟಿಕೆ ನಿರತರು ಸಕ್ರಿಯರಾಗಿದ್ದಾರೆಯೇ ಎನ್ನುವ ಅನುಮಾನ ಮೂಡಿದೆ. ದೇಶಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದ್ದು ಇತ್ತೀಚೆಗಷ್ಟೆ ಬಯಲಾಗಿತ್ತು. ಪ್ರಕರಣ ಸಂಬಂಧಿಸಿ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ, ಹಲವರನ್ನು ವಶಕ್ಕೆ ಪಡೆದಿದ್ದರು. ಈ ವೇಳೆ, ದೇಶದ್ರೋಹಿ ಚಟುವಟಿಕೆಗೆ ಸಂಚು ಹೂಡಿದ್ದ ವಿಚಾರಗಳು ಪತ್ತೆಯಾಗಿದ್ದವು.
ಕಳೆದ ಆರು ತಿಂಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಂಪರ್ಕ ಪತ್ತೆಯಾಗಿದ್ದು ಇದು ನಾಲ್ಕನೇ ಬಾರಿ. ಸ್ಯಾಟಲೈಟ್ ಫೋನ್ ಸಂಪರ್ಕದ ವಿಚಾರ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿಯೂ ಸದ್ದು ಮಾಡಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕಳೆದ 2020ರ ಬಳಿಕ 476 ಸ್ಯಾಟಲೈಟ್ ಫೋನ್ ಕರೆಗಳನ್ನು ಪತ್ತೆ ಮಾಡಲಾಗಿದೆ ಎನ್ನುವುದನ್ನು ತಿಳಿಸಿದ್ದರು. ಅಲ್ಲದೆ, 2020ರಲ್ಲಿ 256 ಬಾರಿ ಮತ್ತು ಈ ವರ್ಷ ಈವರೆಗೆ 220 ಬಾರಿ ಸ್ಯಾಟಲೈಟ್ ಫೋನ್ ಕನೆಕ್ಟ್ ಆಗಿದ್ದು ನಿಗೂಢ ಚಟುವಟಿಕೆ ನಿರತರಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಕರಾವಳಿಯಲ್ಲಿ ಉಗ್ರರ ಈ ಹಿಂದಿನ ಸ್ಲೀಪರ್ ಸೆಲ್ ಮತ್ತೆ ಏಕ್ಟಿವ್ ಆಗಿರುವ ಬಗ್ಗೆ ಪ್ರಬಲ ಶಂಕೆ ವ್ಯಕ್ತವಾಗಿದೆ.
ಮಂಗಳೂರು ಮತ್ತು ಭಟ್ಕಳದಲ್ಲಿ ಎರಡು ತಿಂಗಳ ಹಿಂದೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಐಸಿಸ್ ಪ್ರೇರಿತ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಆನಂತರ, ಕರಾವಳಿಯಲ್ಲಿ ನಿಷೇಧಿತ ಚಟುವಟಿಕೆಗಳು ಮತ್ತಷ್ಟು ನಿಗೂಢವಾಗಿದ್ದಲ್ಲದೆ, ಸಕ್ರಿಯ ಆಗಿರುವುದನ್ನು ಸ್ಯಾಟಲೈಟ್ ಫೋನ್ ಮೂಲಕ ವಿದೇಶಗಳಿಗೆ ಕರೆ ಹೋಗುತ್ತಿರುವುದು ನಿರೂಪಿಸಿದೆ.
The intelligence agencies have alerted the Karnataka government after they tracked satellite phone calls made to foreign locations from the coastal area and Malnad region of the state, sources said on Saturday. The phone calls are being tracked to Mudibidre, Mudipu regions in Dakshina Kannada, in dense forest regions of Uttara Kannada and another two locations from Chikkamagaluru district in the state.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm