ಬ್ರೇಕಿಂಗ್ ನ್ಯೂಸ್
09-10-21 06:52 pm Headline Karnataka News Network ಕ್ರೈಂ
ಬೆಂಗಳೂರು, ಅ.9: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತ ಯುವ ಪೀಳಿಗೆಗೆ ಮಾರಕವಾಗಿದ್ದಂತಹ ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಹಾಗೂ 3 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಯುವ ಜನಾಂಗವನ್ನು ತಪ್ಪುದಾರಿಗೆಳೆಯುತ್ತಿರುವ ಡ್ರಗ್ ಪೆಡ್ಲರ್ಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಇಬ್ಬರು ಅಂತಾರಾಜ್ಯ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2.50 ಲಕ್ಷ ರೂ. ಬೆಲೆಯ 3 ಕೆಜಿ 750 ಗ್ರಾಂ ಗಾಂಜಾ, 4.50 ಲಕ್ಷ ಬೆಲೆಯ 300 ಎಂಡಿಎಂಎ ಮಾತ್ರೆಗಳು, 3 ಲಕ್ಷ ರೂ. ಬೆಲೆಯ ಹೆರಾಯಿನ್ ಹಾಗೂ ಮಾದಕ ವಸ್ತು ಮಾರಾಟ ಮಾಡಿ ಸಂಪಾದಿಸಿದ್ದ 3 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ, ಸಹಾಯಕ ಪೊಲೀಸ್ ಆಯುಕ್ತ ಸುೀರ್ ಹೆಗಡೆ ಮಾರ್ಗದರ್ಶನದಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ಮುನಿರೆಡ್ಡಿ, ಪಿಎಸ್ಐ ಕುಮಾರ್ ಮುಕನವರ್, ಎಎಸ್ಐ ಶರಣಪ್ಪ ವಣಗೇರಿ ಅವರನ್ನೊಳಗೊಂಡ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯದ ಬಗ್ಗೆ ಮೇಲಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
HSR Layout police arrested two accused of Kerala and Manipur and seized Rs 10 lakh worth of marijuana, MDMA tablets, heroin and 3000 rupees.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm