ಬ್ರೇಕಿಂಗ್ ನ್ಯೂಸ್
09-10-21 10:22 pm Mangalore Reporter ಕ್ರೈಂ
ಬಂಟ್ವಾಳ, ಅ.9 : ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಡುಬಿದ್ರೆ ಕಾಪು ನಿವಾಸಿ ಕೆ.ಎಸ್.ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್ ಹಾಗೂ ಇದಾಯತುಲ್ಲಾ ಬಂಧಿತರು. ಶರತ್ ಶೆಟ್ಟಿ ಎಂಬಾತ ಅಪ್ರಾಪ್ತ ಬಾಲಕಿಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದು, ಆನಂತರ ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತಾ ಮಾತನಾಡಿಕೊಂಡು ಸಂಪರ್ಕದಲ್ಲಿದ್ದರು. ಈ ವೇಳೆ, ಶರತ್ ಶೆಟ್ಟಿ ತನ್ನ ಸಂಬಂಧಿ ಯುವಕನಾದ ಮಾರುತಿ ಮಂಜುನಾಥ್ ಎಂಬಾತನಿಗೂ ಬಾಲಕಿಯನ್ನು ಪರಿಚಯ ಮಾಡಿಸಿದ್ದು, ಆತನೂ ಬಾಲಕಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ, ಬಾಲಕಿಯ ಜೊತೆ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿ ಚಾಟ್ ಮಾಡಿಕೊಂಡಿದ್ದ.
ಈ ನಡುವೆ, ಅ.8ರಂದು ಬಾಲಕಿಯನ್ನು ಮಂಗಳೂರಿಗೆ ಬರುವಂತೆ ಶರತ್ ಶೆಟ್ಟಿ ತಿಳಿಸಿದ್ದು, ಅದರಂತೆ ಬಸ್ಸಿನಲ್ಲಿ ಬಂದಿದ್ದ ಬಾಲಕಿಯನ್ನು ಮಂಗಳೂರಿನ ಸಿಟಿ ಮಹಲ್ ಲಾಡ್ಜ್ ಬಳಿ ಭೇಟಿಯಾಗಿದ್ದಾನೆ. ಆನಂತರ, ಲಾಡ್ಜ್ ಗೆ ಹೋಗಿ ವಿಶ್ರಾಂತಿ ಮಾಡೋಣ ಎಂದು ಪುಸಲಾಯಿಸಿದ್ದು ಲಾಡ್ಜ್ ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆನಂತರ, ತನ್ನ ಸ್ನೇಹಿತ ಇದಾಯತುಲ್ಲಾ ಎಂಬಾತನನ್ನು ಕರೆದಿದ್ದು, ಒಂದು ಹುಡುಗಿ ಇದೆ ಎಂದು ಹೇಳಿ ಬರಹೇಳಿದ್ದಾನೆ. ಇದಾಯತುಲ್ಲಾ ಕೂಡ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದ. ಇವರಿಗೆ ಲಾಡ್ಜ್ ವ್ಯವಸ್ಥೆಯನ್ನು ಶರತ್ ಶೆಟ್ಟಿ ಸ್ನೇಹಿತ ಸತೀಶ್ ಎಂಬಾತ ಮಾಡಿದ್ದು, ಅಲ್ಲದೆ, ಲಾಡ್ಜ್ ನಲ್ಲಿ ಹುಡುಗಿಯ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದ. ಆನಂತರ ಬಾಲಕಿ ಬಸ್ಸಿನ ಮೂಲಕ ಬಂಟ್ವಾಳಕ್ಕೆ ಬಂದಿದ್ದಳು.
ಬಾಲಕಿ ಅಪ್ರಾಪ್ತಳಾಗಿದ್ದರಿಂದ ಪ್ರಕರಣ ಸಂಬಂಧಿಸಿ ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಲೈಂಗಿಕ ಶೋಷಣೆ ಮತ್ತು ಬೆದರಿಕೆ ವಿಚಾರದಲ್ಲಿ ಕಲಂ 366 ಎ, 376ಡಿ ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಶಾಲೆಗೆ ತೆರಳಿದ್ದ ಬಾಲಕಿಯನ್ನು ತಂಡವೊಂದು ಅಪಹರಿಸಿ, ಅಮ್ಟಾಡಿ ಎಂಬಲ್ಲಿಗೆ ಕರೆದೊಯ್ದು ಮತ್ತು ಬರಿಸುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಿದ್ದಾಗಿ ಹೇಳಲಾಗಿತ್ತು. ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ನೈಜ ವಿಚಾರ ಹೊರಬಿದ್ದಿದೆ. ಅಲ್ಲದೆ, ಪ್ರಕರಣದಲ್ಲಿ ಬಾಲಕಿಯೇ ಯುವಕರ ಜೊತೆ ಸಲುಗೆಯಿಂದ ವರ್ತಿಸಿದ್ದು ಮತ್ತು ಫೇಸ್ಬುಕ್ ಜಾಲವನ್ನು ದುರುಪಯೋಗ ಮಾಡಿಕೊಂಡಿದ್ದು ಕಂಡುಬಂದಿದೆ.
Bantwal Gang rape case police arrest four accused girl was introduced on Facebook says prime accused. A minor girl from Bantwal was allegedly gang-raped by five men on Friday. The incident occured at Amtady where the accused kidnapped her from an auto rickshaw stand, took her to a secluded place and gang-raped her.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm