ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm