ಬ್ರೇಕಿಂಗ್ ನ್ಯೂಸ್
10-10-21 08:33 am Mangalore Reporter ಕ್ರೈಂ
ಪುತ್ತೂರು, ಅ.10: ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರವನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವನ್ನು ಮಡಿಕೇರಿ ಪೊಲೀಸರು ಭೇದಿಸಿದ್ದಾರೆ. ಪುತ್ತೂರು ತಾಲೂಕಿನ ಸಾಲ್ಮರ ನಿವಾಸಿ ಪುನಿತ್ ಕುಮಾರ್(32) ಮತ್ತು ಮೈಸೂರಿನ ಗಾಯತ್ರಿಪುರದ ಅರುಣ್ ಕುಮಾರ್ (30) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮೈಸೂರಿನ ನಂಜರಾಯಪಟ್ಟಣದ ಕೆ.ಎಂ.ಯಶ್ವಿತಾ ಎಂಬ ಯುವತಿಗೆ ಮಡಿಕೇರಿ ಜಿಲ್ಲಾಧಿಕಾರಿಯ ಸಹಿ ನಕಲಿ ಮಾಡಿದ್ದಲ್ಲದೆ, ಅವರ ಹೆಸರಲ್ಲಿ ಉದ್ಯೋಗ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ನೀಡಿದ್ದರು. ಅಂಚೆಯಲ್ಲಿ ನೇಮಕಾತಿ ಪತ್ರವನ್ನು ನೀಡಿದ್ದಲ್ಲದೆ, ಇದಕ್ಕಾಗಿ 1.50 ಲಕ್ಷ ರೂಪಾಯಿ ಹಣ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಯಶ್ವಿತಾ ಜಿಲ್ಲಾಧಿಕಾರಿಗಳ ಬಳಿ ಮಾಹಿತಿ ಕೇಳಿದಾಗ, ಆರೋಪಿಗಳ ಟೊಳ್ಳುತನ ಬಯಲಾಗಿತ್ತು.
ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಿ ಎಚ್ಚರಿಕೆ ರವಾನಿಸಿದ್ದರು. ಅಲ್ಲದೆ, ಜಿಲ್ಲಾಧಿಕಾರಿಯ ಸೂಚನೆಯಂತೆ ಶಿರಸ್ತೇದಾರ್ ಪ್ರಕಾಶ್, ಮಡಿಕೇರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ತನಿಖೆ ನಡೆಸಿ ಪ್ರಕರಣ ಸಂಬಂಧಿಸಿ ಚಂದ್ರಶೇಖರ್, ರಾಜಮಣಿ ಯಾನೆ ಲೋಕೇಶ್ ಮತ್ತು ಗಣಪತಿ ಯಾನೆ ಶಬರೀಶ ಎಂಬವರನ್ನು ಬಂಧಿಸಿದ್ದರು. ವಂಚಕರ ಜಾಲದ ಪ್ರಮುಖ ರೂವಾರಿ ಪುನೀತ್ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಪುತ್ತೂರಿನ ಕೆಮ್ಮಿಂಜೆಯಲ್ಲಿ ಬಂಧಿಸಿದ್ದಾರೆ.

ಎಸ್ಐ ಕೆಲಸಕ್ಕೆ ಆಮಿಷವೊಡ್ಡಿ ಸಿಕ್ಕಿಬಿದ್ದ ;
ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದಾಗ ಪೊಲೀಸರಿಗೆ ಬಹಳಷ್ಟು ಮಾಹಿತಿಗಳು ತಿಳಿದುಬಂದಿದ್ದವು. ಆರೋಪಿಗಳು ಪೊಲೀಸ್ ಇಲಾಖೆಯಲ್ಲಿಯೂ ಎಸ್ಐ ಇನ್ನಿತರ ಹುದ್ದೆಗಳನ್ನು ಮಾಡಿಕೊಡುತ್ತೇವೆಂದು ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿದ್ದರೆಂದು ತಿಳಿದುಬಂದಿತ್ತು. ಇದೇ ವೇಳೆ, ಮಡಿಕೇರಿಯಲ್ಲಿ ಎಸ್ಐ ಹುದ್ದೆ ಕೊಡಿಸುತ್ತೇನೆಂದು ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಸಿಐಡಿ ಬೆಂಗಳೂರು ಘಟಕಕ್ಕೆ ವರ್ಗಾಯಿಸಿ ತನಿಖೆ ನಡೆಸುತ್ತಿರುವಾಗಲೇ ಪುನೀತ್ ಕುಮಾರ್ ಮತ್ತು ಮೈಸೂರಿನ ಅರುಣ್ ಕುಮಾರ್ ಅವರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪುನೀತ್ ಬಳಿಯಿಂದ 5.50 ಲಕ್ಷ ರೂ. ನಗದು ಮತ್ತು 3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಡಗು ಎಸ್ಪಿ ಕ್ಷಮಾ ಮಿಶ್ರಾ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಯಲ್ಲಿ ಗುಪ್ತದಳದ ನಿರೀಕ್ಷಕ ಐ.ಪಿ ಮೇದಪ್ಪ, ಅಪರಾಧ ಪತ್ತೆ ದಳದ ಸಹಾಯಕ ಠಾಣಾಧಿಕಾರಿ ಹಮೀದ್, ಸಿಬ್ಬಂದಿಗಳಾದ ಯೋಗೇಶ್ ಕುಮಾರ್, ನಿರಂಜನ್, ವಸಂತ, ವೆಂಕಟೇಶ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಸಿಡಿಆರ್ ಘಟಕದ ರಾಜೇಶ್, ಗಿರೀಶ್ ಭಾಗವಹಿಸಿದ್ದರು.
Puttur Man arrested for cheating of giving Police SI jobs in Mangalore Mysuru and Madikeri by creating fake documents. The arrested has been identified as Puneeth Kumar.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm