ಬ್ರೇಕಿಂಗ್ ನ್ಯೂಸ್
12-10-21 10:07 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಅ 12: ರಾತ್ರಿ ವೇಳೆ ಮನೆಗೆ ತಡವಾಗಿ ಬಂದಿದ್ದಾಳೆ ಎಂಬ ಕಾರಣಕ್ಕೆ ಹತ್ತು ವರ್ಷದ ಮಗಳನ್ನು ಕೋಲಿನಿಂದ ಮನಬಂದಂತೆ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಉತ್ತಮ್ ಪುರಂ ಎಂಬಲ್ಲಿ ನಡೆದಿದೆ.
ಸ್ನೇಹಿತರೊಂದಿಗೆ ದುರ್ಗಾ ಪೂಜೆಗೆ ತೆರಳಿದ್ದ ಮಗಳು, ತಡವಾಗಿ ಮನೆಗೆ ಬಂದ ಕಾರಣಕ್ಕೆ ಕುಪಿತಗೊಂಡ ತಂದೆ ರಾಕೇಶ್ ಜಾತವ್ ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ.
ಕೊಲೆಯಾದ ಬಾಲಕಿ ನೆರೆಮನೆಯ ಸ್ನೇಹಿತೆಯರೊಂದಿಗೆ ದುರ್ಗಾ ಪೂಜೆಗೆ ತೆರಳಿದ್ದಳು. ಅಲ್ಲಿಂದ ಮನೆಗೆ ಮರಳುವಾಗ ತಡರಾತ್ರಿ 11 ಗಂಟೆಯಾಗಿತ್ತು. ಈ ಕಾರಣಕ್ಕಾಗಿ ತಂದೆ ಕೋಪಗೊಂಡು ಕೋಲಿನಿಂದ ಮನಬಂದಂತೆ ಹೊಡೆದಿದ್ದಾನೆ. ಹೊಡೆತದಿಂದ ತೀವ್ರವಾಗಿ ಗಾಯಗೊಂಡ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನಾ ಸ್ಥಳಕ್ಕೆ ತೆರಳಿದ ಪೋಲಿಸರು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಜಾತವ್ ಕುಡಿತದ ಚಟ ಹೊಂದಿದ್ದ. ಪ್ರತಿ ದಿನ ಪತ್ನಿ ಮತ್ತು ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.
Father kills his 10 year old daughter for being home late night in Uttar Pradesh. Accused father has been arrested by the police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am