ಬ್ರೇಕಿಂಗ್ ನ್ಯೂಸ್
13-10-21 08:37 pm Bengaluru Correspondent ಕ್ರೈಂ
ಬೆಂಗಳೂರು, ಅ.13: ಫೇಸ್ಬುಕ್ ಮೂಲಕ ಯುವತಿಯರ ಜೊತೆ ಸಂಪರ್ಕ ಬೆಳೆಸಿ, ನಗ್ನ ವಿಡಿಯೋ ಪಡೆದುಕೊಂಡು ಬ್ಲಾಕ್ಮೇಲ್ ನಡೆಸುತ್ತಿದ್ದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ನಾಲ್ವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಾಕಿರ್, ಪಹರಿ, ಕಸಮ್ ಖಾನ್, ಜಾಮಿಲ್ ಖಾನ್ ಎಂದು ಗುರುತಿಸಲಾಗಿದೆ. ದೂರಿಗೆ ಸಂಬಂಧಿಸಿ, ಇನ್ ಸ್ಪೆಕ್ಟರ್ ನಯಾಜ್ ಅಹ್ಮದ್ ನೇತೃತ್ವದ ಬೆಂಗಳೂರು ಪೊಲೀಸರು ರಾಜಸ್ಥಾನದ ಭರತ್ ಪುರ, ಆಲ್ವಾರ್ ಮತ್ತಿತರ ಪ್ರದೇಶಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದರು. ಆಲ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮತ್ತು ಬೈತಕೂಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಯುವತಿಯರನ್ನು ಲೈಂಗಿಕ ಶೋಷಣೆ ನಡೆಸುತ್ತಿದ್ದ ಆರೋಪದಲ್ಲಿ ಸೈಬರ್ ಕ್ರೈಮ್
ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಜಸ್ಥಾನ ಮತ್ತು ಹರ್ಯಾಣದಲ್ಲಿ ಹಲವರನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿಗಳು ಫೇಸ್ಬುಕ್ ಮತ್ತು ಇನ್ ಸ್ಟಾ ಗ್ರಾಮ್ ಬಳಕೆದಾರರನ್ನು ಗುರಿಯಾಗಿಸಿ ಖಾಸಗಿ ಮಾಹಿತಿ ಪಡೆದು ಗಾಳ ಹಾಕುತ್ತಿದ್ದರು ಅನ್ನೋದು ಬೆಳಕಿಗೆ ಬಂದಿದೆ.
ಯುವತಿ ಹೆಸರಿನಲ್ಲೇ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಗೆಳೆತನ ಮಾಡುತ್ತಿದ್ದ ಇವರು ಚಾಟಿಂಗ್ ಮಾಡಿ ನಂಟು ಬೆಳೆಸುತ್ತಿದ್ದರು. ಆನಂತರ ವಾಟ್ಸಪ್, ವಿಡಿಯೋ ಕರೆ ಮಾಡಿ, ನಗ್ನ ವಿಡಿಯೋ ತೋರಿಸಲು ಹೇಳಿ ಅದನ್ನು ಅವರಿಗೆ ತಿಳಿಯದಂತೆ ರೆಕಾರ್ಡ್ ಮಾಡುತ್ತಿದ್ದರು. ಆನಂತರ ಸಂತ್ರಸ್ತ ಯುವತಿಯರನ್ನು ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಹೇಳಿ, ಬೆದರಿಸಿ ಹಣ ಕೀಳುತ್ತಿದ್ದರು. ಈ ರೀತಿಯ ಯಾವುದೇ ದೂರುಗಳಿದ್ದವಲ್ಲಿ ಅಥವಾ ಸಂತ್ರಸ್ತರು ಶೋಷಣೆಗೆ ಒಳಗಾಗಿದ್ದಲ್ಲಿ ಸೈಬರ್ ಕ್ರೈಮ್ ಗೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
The Karnataka Cyber Crime Division has arrested four persons involved in extortion after recording nude videos of the victims by becoming friends on social media platforms, an official statement said on Tuesday. The arrested persons were identified as Sakir, Pahari, Kasam Khan, Jamil Khan.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm