ಕಾವೂರು ; ಯುವಕನ ಅಡ್ಡಗಟ್ಟಿ ಇರಿದು ಪರಾರಿಯಾದ ದುಷ್ಕರ್ಮಿಗಳು 

14-10-21 12:58 pm       Mangaluru Correspondent   ಕ್ರೈಂ

ಯುವಕನೊಬ್ಬ ಬೈಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ಮಾಲೆಮಾರ್ ಬಳಿ ನಡೆದಿದೆ.

ಮಂಗಳೂರು, ಅ.14: ಯುವಕನೊಬ್ಬ ಬೈಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ಮಾಲೆಮಾರ್ ಬಳಿ ನಡೆದಿದೆ. 

ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಕೊಟ್ಟಾರದಿಂದ ತೆರಳುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮೂರು ಮಂದಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Mangalore Miscreants stab Youth in Kavoor and escape. Rajesh (45) from panjimogaru was stabbed while he was returning back to his home.