ಬ್ರೇಕಿಂಗ್ ನ್ಯೂಸ್
14-10-21 08:14 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 14: ''ಅರಬ್ಬಿ ಸಮುದ್ರದಲ್ಲಿ ತೇಲುತ್ತಿದ್ದ ಕ್ರೂಸರ್ ಶಿಪ್ನಲ್ಲಿ ನಿಗದಿತ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿದ್ದ ಆರ್ಯನ್ ಖಾನ್ ಡ್ರಗ್ ಸಾಗಿಸಿಲ್ಲ, ಡ್ರಗ್ಸ್ ಹೊಂದಿರಲಿಲ್ಲ, ವಿದೇಶಿ ಕರೆನ್ಸಿ ಜಪ್ತಿಯಾಗಿಲ್ಲ, ಹೀಗಿದ್ದು, ನನ್ನ ಕಕ್ಷಿದಾರರ ಬಂಧನವೇಕೆ?,'' ಎಂದು ಹಿರಿಯ ವಕೀಲ ಅಮಿತ್ ದೇಸಾಯಿ ವಾದಿಸಿದ್ದಾರೆ. ಆದರೆ, ಆರ್ಯನ್ ಹಾಗೂ ಸಹ ಆರೋಪಿಗಳ ಜಾಮೀನು ಅರ್ಜಿ ವಜಾಗೊಂಡಿದ್ದು, ಅಕ್ಟೋಬರ್ 20ರಂದು ಎನ್. ಡಿ.ಪಿ. ಎಸ್ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ನೀಡಲಿದೆ.
ಆರ್ಯನ್ ಖಾನ್ ಜಾಮೀನು ಮನವಿಯ ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯವು, ಆರೋಪಿಗಳಿಗೆ ರಿಮ್ಯಾಂಡ್ ವಿಸ್ತರಿಸಲಾಗಿಲ್ಲ, ಹಾಗಾಗಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಖಾನ್ಗೆ ಸಮನ್ಸ್ ನೀಡಿ, ತನಿಖೆ ನಡೆಸಲಾಗಿದೆ. ಹಾಗಾಗಿ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನ ಮುಂದುವರೆಯಲಿದೆ ಎಂದಿದೆ. ಆರ್ಥರ್ ರೋಡ್ ಜೈಲಿನಲ್ಲಿ ಆರ್ಯನ್ ಖಾನ್ ಇತರರನ್ನು ಕೋವಿಡ್ 19 ಮಾರ್ಗಸೂಚಿಯಂತೆ ಇರಿಸಲು ಸೂಚಿಸಲಾಗಿದೆ. ಪೊಲೀಸರ ಕಸ್ಟಡಿಗೆ ನೀಡಿಲ್ಲವಾದ್ದರಿಂದ ಇದು ಜಾಮೀನು ನೀಡಲು ಅತಿ ಮುಖ್ಯವಾಗುತ್ತದೆ ಎಂದು ವಕೀಲ ದೇಸಾಯಿ ಹೇಳಿದ್ದಾರೆ.
"ಆರ್ಯನ್ ಅವರನ್ನು ಎನ್ಡಿಪಿಎಸ್ ಕಾಯಿದೆಯ ಸೆಕ್ಷನ್ಗಳಾದ 27, 20(ಬಿ), 28, 29, 8(ಸಿ) ಅಡಿ ಬಂಧಿಸಲಾಗಿದೆ. ಎನ್ಸಿಬಿ ಪ್ರತಿಕ್ರಿಯೆಯಲ್ಲಿ ಕಾನೂನುಬಾಹಿರ ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಆರ್ಯನ್ ಅವರನ್ನು ಎನ್ಡಿಪಿಎಸ್ ಕಾಯಿದೆಯ ಸೆಕ್ಷನ್ 27ಎ ಅಡಿ ಬಂಧಿಸಲಾಗಿಲ್ಲ" ಎಂದು ದೇಸಾಯಿ ಅವರು ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್ ಅವರ ಏಕಸದಸ್ಯ ಪೀಠದ ಮುಂದೆ ವಾದಿಸಿದರು.
ಎನ್ಸಿಬಿಯು ಅಂತಾರಾಷ್ಟ್ರೀಯ ಮಾದಕ ವಸ್ತು ಕಳ್ಳ ಸಾಗಣೆಯ ಆರೋಪ ಮಾಡಿದೆ. ಇದರಲ್ಲಿ ವಿದೇಶಿ ಪ್ರಜೆಗಳೂ ಇದ್ದಾರೆ... ಈ ಪ್ರಕರಣವನ್ನು ಅವರು ಪಿತೂರಿ ವಿಭಾಗದಲ್ಲಿ ಬಳಕೆ ಮಾಡುತ್ತಿದ್ದಾರೆ... ಪ್ರತಿಕ್ರಿಯೆಯಲ್ಲಿ ಎನ್ಸಿಬಿಯು ಹಲವು ಆರೋಪಿಗಳನ್ನು ಉಲ್ಲೇಖಿಸಿದೆ.

ಎನ್ ಸಿಬಿ ಪರ ವಕೀಲ ಅನಿಲ್ ಸಿಂಗ್ ವಾದ;
ಆರ್ಯನ್ ಖಾನ್ ವಾಟ್ಸಾಪ್ ಸಂದೇಶ, ಡ್ರಗ್ ಗುಣಮಟ್ಟ, ವಿದೇಶಿ ಪ್ರಜೆಗಳು ಭಾಗಿಯಾಗಿರುವುದು ಎಲ್ಲವೂ ಪ್ರಕರಣದಲ್ಲಿ ಮುಖ್ಯವಾಗಿದೆ. ಒಂದೇ ಕಾರಿನಲ್ಲಿ ಖಾನ್ ಮನೆಗೆ ಮರ್ಚೆಂಟ್ ತೆರಳಿದ್ದಾರೆ. ಬಂಧನವಾದಾಗ ಇಬ್ಬರೂ ಟರ್ಮಿನಲ್ ಬಳಿ ಇದ್ದರು. ಅರ್ಬಾಜ್ ಮರ್ಚೆಂಟ್ ಬಳಿ ಇದ್ದ ಮಾದಕ ವಸ್ತುವನ್ನು ತಾವು ಸೇವಿಸಿಲು ಇಟ್ಟುಕೊಂಡಿದ್ದರು. ಇದು ಇಬ್ಬರಿಗೂ ತಿಳಿದಿತ್ತು. ಮರ್ಚೆಂಟ್ ಮಾದಕ ವಸ್ತು ಸೇವಿಸಿದ್ದಾರೆ ಎಂಬುದು ಖಾನ್ಗೆ ತಿಳಿದಿತ್ತು ಎಂದ ಸಿಂಗ್. ಕಾನೂನುಬಾಹಿರ ಮಾದಕ ವಸ್ತುಗಳ ಸಂಗ್ರಹದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲದಲ್ಲಿರುವ ಕೆಲವರ ಜೊತೆ ಖಾನ್ ಸಂಪರ್ಕದಲ್ಲಿದ್ದಾರೆ ಎಂದು ತೋರಿಸಲು ದಾಖಲೆಗಳಿವೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದೆ ಎಂದು ಎನ್ಸಿಬಿ ಹೇಳಿದೆ. ಉಭಯ ಪಕ್ಷದ ವಕೀಲರ ವಾದ-ಪ್ರತಿವಾದ ಆಲಿಸಿದ ಕೋರ್ಟ್, ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಅಕ್ಟೋಬರ್ 20ರಂದು ತೀರ್ಪು ಹೊರಬರಲಿದೆ. ಐಸೋಲೇಷನ್ ಅವಧಿ ಮುಗಿದಿರುವುದರಿಂದ ಉಳಿದ ಕೈದಿಗಳ ಜೊತೆ ಆರ್ಯನ್ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
Bollywood star Shah Rukh Khan's 23-year-old son Aryan Khan did not get bail in the drugs-on-cruise case today from a Mumbai sessions court that reserved the order till next Wednesday, sending him back to jail. Shah Rukh Khan's son Aryan Khan - Accused No. 1 for the Narcotics Control Bureau (NCB) - allegedly "indulged in illicit drug trafficking", and was in touch with "some persons abroad who appear to be a part of an International Drug Network" to procure a "bulk quantity of hard drugs", the anti-narcotics agency said in a statement to the court on Wednesday.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am