ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm