ಬ್ರೇಕಿಂಗ್ ನ್ಯೂಸ್
16-10-21 06:07 pm Headline Karnataka News Network ಕ್ರೈಂ
ಮಂಗಳೂರು, ಅ.16: ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮವಿತ್ತ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದ್ದು, ಘಟನೆಗೆ ಆರೆಸ್ಸೆಸ್ ಮುಖಂಡ ನಾರಾಯಣ ರೈ ಎಂಬವರೇ ಕಾರಣ ಎಂದು ದಲಿತ ಸಂಘಟನೆಗಳು ಆರೋಪಿಸಿವೆ. ಈ ಬಗ್ಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು ಸಂತ್ರಸ್ತ ಬಾಲಕಿ ಮತ್ತು ಆಕೆಯ ಹೆತ್ತವರು ಕೂಡ ಪಾಲ್ಗೊಂಡಿದ್ದರು.
ನಾರಾಯಣ ರೈ ಎಂಬವರಿಗೆ ಸೇರಿದ ತೋಟಕ್ಕೆ ಬಾಲಕಿ ಕೆಲಸಕ್ಕೆ ಹೋಗುತ್ತಿದ್ದಾಗ ಹುಡುಗಿಯ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡು ಅತ್ಯಾಚಾರ ನಡೆಸಿದ್ದಾರೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕಳೆದ ಸೆ.4ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮವಿತ್ತಿದ್ದಾಳೆ. ಈ ಬಗ್ಗೆ ಪುತ್ತೂರು ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದರೂ, ಅಲ್ಲಿ ಪ್ರಕರಣವನ್ನು ಪೊಲೀಸರು ತಿರುಚಿದ್ದಾರೆ. ಆರೋಪಿಯ ಪ್ರಭಾವಕ್ಕೊಳಗಾಗಿ ಪೊಲೀಸರು ಪ್ರಮೋದ್ ಎಂಬ ಯುವಕನ ಹೆಸರನ್ನು ಅದರಲ್ಲಿ ನಮೂದಿಸಿದ್ದಾರೆ. ಆರೋಪಿ ನಾರಾಯಣ ರೈ ಹೆಸರನ್ನು ಪ್ರಕರಣದಿಂದ ಹೊರಗಿಡಲು ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ಸಮಿತಿಯ ಮುಖಂಡ ಆನಂದ ಬೆಳ್ಳಾರೆ ಆರೋಪಿಸಿದರು.

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಾಲಕಿ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ನಾರಾಯಣ ರೈ ಹೆಸರು ಹೇಳಿದರೆ, ಬೆನ್ನಿನ ಸಿಪ್ಪೆ ಸುಲಿದು ಕೇಸು ಹಾಕಿ ಜೈಲಿಗೆ ಹಾಕುತ್ತೇವೆ ಎಂದು ಬೆದರಿಸಿದ್ದಾರೆ. ಸಂಪ್ಯ ಠಾಣೆ ಪೊಲೀಸರು ಆರೋಪಿಯನ್ನು ರಕ್ಷಿಸುವುದಕ್ಕಾಗಿ ಘಟನೆಗೆ ಸಂಬಂಧವಿಲ್ಲದ ಪ್ರಮೋದ್ ಎನ್ನುವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧಿಸಿ ಬಾಲಕಿಯ ಸೋದರನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬಾಲಕಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಿದ್ದು, ಅವರ ಸೂಚನೆಯಂತೆ ನಾರಾಯಣ ರೈ ವಿರುದ್ಧ ದಲಿತ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಆದರೆ, ಆರೋಪಿಯನ್ನು ಇನ್ನೂ ಬಂಧಿಸಿಲ್ಲ. ಪೊಲೀಸರು ಪ್ರಕರಣದ ನೈಜಾಂಶ ಅರಿಯುವುದಕ್ಕಾಗಿ ಮಗು ಮತ್ತು ಆರೋಪಿ ನಾರಾಯಣ ರೈ ಇಬ್ಬರದ್ದೂ ಡಿಎನ್ಐ ಟೆಸ್ಟ್ ಮಾಡಿಸಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಎಸ್ಪಿ ಋಷಿಕುಮಾರ್ ಸೋನವಾಣೆ ಬಳಿ ಕೇಳಿದರೆ, ಯಾವುದೇ ಪ್ರಕರಣಕ್ಕೂ ಒಂದು ಪ್ರೊಸೀಜರ್ ಇರುತ್ತದೆ. ಆರೋಪ ಬಂದ ಕೂಡಲೇ ಬಂಧಿಸಲೇಬೇಕು ಎನ್ನುವುದಿಲ್ಲ. ಕೆಲವು ಸಾಕ್ಷ್ಯಗಳನ್ನು ಕಲೆಹಾಕಿ ಬಂಧನ ಪ್ರಕ್ರಿಯೆ ನಡೆಸಲಾಗುತ್ತದೆ. ಆ ವ್ಯಕ್ತಿಯ ಬಗ್ಗೆ ಆರೋಪ ಕೇಳಿಬಂದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ. ಡಿಎನ್ಎ ಟೆಸ್ಟ್ ಮಾಡಲು ಮಗುವಿಗೆ ಮೂರು ತಿಂಗಳ ಆಗಬೇಕು. ಆನಂತರ, ಅದನ್ನೂ ಮಾಡುತ್ತೇವೆ. ಇವರು ಅರ್ಜೆಂಟ್ ಮಾಡಿದರೆ ನಾವೇನು ಮಾಡೋಕೆ ಆಗುತ್ತದೆ ಎಂದು ಹೇಳಿದ್ದಾರೆ.
Coordination committee of Dalit organisations has demanded for the immediate arrest of Rashtriya Swayamsevak Sangh (RSS) leader, Narayana Rai, who has been accused of raping a minor girl belonging to Dalit community who used to work in his farm in Badagannur village, Puttur taluk. The girl gave birth to a baby recently. The committee held a press meet in the city on Saturday October 16.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm