ಬ್ರೇಕಿಂಗ್ ನ್ಯೂಸ್
18-10-21 02:07 pm Headline Karnataka News Network ಕ್ರೈಂ
ಕೋಲ್ಕತ್ತಾ, ಅ 18: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಇಟಾಹಾರ್ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿ.
ರಾಜ್ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಭಾನುವಾರ ರಾತ್ರಿ 11 ಗಂಟೆಗೆ ಘೋಷ್ ಹೊರಗೆ ನಿಂತಿದ್ದರು. ಬೈಕ್ನಲ್ಲಿ ಬಂದ ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.
ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವೀಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾರಾಫ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್ಗೂ, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್ಪುರ ಬಿಜೆಪಿ ಅಧ್ಯಕ್ಷ ವಸುದೇವ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Mithun Ghosh, a youth BJP leader from Itahar in the North Dinajpur district of West Bengal, was killed by unknown miscreants outside his home in the Rajgram village on Sunday. According to the BJP, Trinamool Congress anti-socials are responsible for the murder. However, the Trinamool Congress has dismissed the allegation.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm