ಬ್ರೇಕಿಂಗ್ ನ್ಯೂಸ್
18-10-21 02:07 pm Headline Karnataka News Network ಕ್ರೈಂ
ಕೋಲ್ಕತ್ತಾ, ಅ 18: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಇಟಾಹಾರ್ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿ.
ರಾಜ್ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಭಾನುವಾರ ರಾತ್ರಿ 11 ಗಂಟೆಗೆ ಘೋಷ್ ಹೊರಗೆ ನಿಂತಿದ್ದರು. ಬೈಕ್ನಲ್ಲಿ ಬಂದ ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.
ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವೀಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾರಾಫ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್ಗೂ, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್ಪುರ ಬಿಜೆಪಿ ಅಧ್ಯಕ್ಷ ವಸುದೇವ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Mithun Ghosh, a youth BJP leader from Itahar in the North Dinajpur district of West Bengal, was killed by unknown miscreants outside his home in the Rajgram village on Sunday. According to the BJP, Trinamool Congress anti-socials are responsible for the murder. However, the Trinamool Congress has dismissed the allegation.
06-09-25 07:26 pm
Bangalore Correspondent
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 07:45 pm
HK News Desk
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm