ಬ್ರೇಕಿಂಗ್ ನ್ಯೂಸ್
18-10-21 02:07 pm Headline Karnataka News Network ಕ್ರೈಂ
ಕೋಲ್ಕತ್ತಾ, ಅ 18: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಇಟಾಹಾರ್ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿ.
ರಾಜ್ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಭಾನುವಾರ ರಾತ್ರಿ 11 ಗಂಟೆಗೆ ಘೋಷ್ ಹೊರಗೆ ನಿಂತಿದ್ದರು. ಬೈಕ್ನಲ್ಲಿ ಬಂದ ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.
ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವೀಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾರಾಫ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್ಗೂ, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್ಪುರ ಬಿಜೆಪಿ ಅಧ್ಯಕ್ಷ ವಸುದೇವ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Mithun Ghosh, a youth BJP leader from Itahar in the North Dinajpur district of West Bengal, was killed by unknown miscreants outside his home in the Rajgram village on Sunday. According to the BJP, Trinamool Congress anti-socials are responsible for the murder. However, the Trinamool Congress has dismissed the allegation.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm