ಬ್ರೇಕಿಂಗ್ ನ್ಯೂಸ್
19-10-21 09:24 am Mangaluru Correspondent ಕ್ರೈಂ
ಮಂಗಳೂರು, ಅ.19: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376, 376-2, 376(2)-ಕೆ, 376 ಸಿ, 511, 354(ಎ), 354(ಬಿ), 354 (ಸಿ), 354 (ಡಿ), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು. ಲೋಕಾಯುಕ್ತ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಲು ಸರಕಾರದಿಂದ ನೇಮಕಗೊಂಡ ವಕೀಲರಾಗಿದ್ದರು. ಹೀಗಾಗಿ ರಾಜೇಶ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ಗೋಗರೆಯುವ ಆಡಿಯೋ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜೇಶ್, ಇದು ನನ್ನ ಇಮೇಜ್ ಹಾಳು ಮಾಡಲು ಯತ್ನಿಸುವ ಪ್ರಯತ್ನ. ನನ್ನನ್ನು ಲೋಕಾಯುಕ್ತ ಹುದ್ದೆಯಿಂದ ತೆರವುಗೊಳಿಸಲು ಕೆಲವು ವಕೀಲರೇ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಆಡಿಯೋ ತನ್ನದಲ್ಲ. ಯಾರೋ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಈ ನಡುವೆ, ಸೋಮವಾರ ಸಂಜೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿದ್ದ ಎಬಿವಿಪಿ ನಿಯೋಗ, ವಕೀಲನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.

ಇದರ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ
Mangalore Police file FIR against Advocate KSN Rajesh of KSN Associates over rape attempt of staff at his office. The girl has filed a complaint stating that she was sexually harassed by the Advocate. Rajesh is said to be absconding
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm