ಬ್ರೇಕಿಂಗ್ ನ್ಯೂಸ್
19-10-21 09:24 am Mangaluru Correspondent ಕ್ರೈಂ
ಮಂಗಳೂರು, ಅ.19: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376, 376-2, 376(2)-ಕೆ, 376 ಸಿ, 511, 354(ಎ), 354(ಬಿ), 354 (ಸಿ), 354 (ಡಿ), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು. ಲೋಕಾಯುಕ್ತ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಲು ಸರಕಾರದಿಂದ ನೇಮಕಗೊಂಡ ವಕೀಲರಾಗಿದ್ದರು. ಹೀಗಾಗಿ ರಾಜೇಶ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ಗೋಗರೆಯುವ ಆಡಿಯೋ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜೇಶ್, ಇದು ನನ್ನ ಇಮೇಜ್ ಹಾಳು ಮಾಡಲು ಯತ್ನಿಸುವ ಪ್ರಯತ್ನ. ನನ್ನನ್ನು ಲೋಕಾಯುಕ್ತ ಹುದ್ದೆಯಿಂದ ತೆರವುಗೊಳಿಸಲು ಕೆಲವು ವಕೀಲರೇ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಆಡಿಯೋ ತನ್ನದಲ್ಲ. ಯಾರೋ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಈ ನಡುವೆ, ಸೋಮವಾರ ಸಂಜೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿದ್ದ ಎಬಿವಿಪಿ ನಿಯೋಗ, ವಕೀಲನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.

ಇದರ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ
Mangalore Police file FIR against Advocate KSN Rajesh of KSN Associates over rape attempt of staff at his office. The girl has filed a complaint stating that she was sexually harassed by the Advocate. Rajesh is said to be absconding
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm