ಬ್ರೇಕಿಂಗ್ ನ್ಯೂಸ್
19-10-21 09:24 am Mangaluru Correspondent ಕ್ರೈಂ
ಮಂಗಳೂರು, ಅ.19: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376, 376-2, 376(2)-ಕೆ, 376 ಸಿ, 511, 354(ಎ), 354(ಬಿ), 354 (ಸಿ), 354 (ಡಿ), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು. ಲೋಕಾಯುಕ್ತ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಲು ಸರಕಾರದಿಂದ ನೇಮಕಗೊಂಡ ವಕೀಲರಾಗಿದ್ದರು. ಹೀಗಾಗಿ ರಾಜೇಶ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ಗೋಗರೆಯುವ ಆಡಿಯೋ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜೇಶ್, ಇದು ನನ್ನ ಇಮೇಜ್ ಹಾಳು ಮಾಡಲು ಯತ್ನಿಸುವ ಪ್ರಯತ್ನ. ನನ್ನನ್ನು ಲೋಕಾಯುಕ್ತ ಹುದ್ದೆಯಿಂದ ತೆರವುಗೊಳಿಸಲು ಕೆಲವು ವಕೀಲರೇ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಆಡಿಯೋ ತನ್ನದಲ್ಲ. ಯಾರೋ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಈ ನಡುವೆ, ಸೋಮವಾರ ಸಂಜೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿದ್ದ ಎಬಿವಿಪಿ ನಿಯೋಗ, ವಕೀಲನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.

ಇದರ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ
Mangalore Police file FIR against Advocate KSN Rajesh of KSN Associates over rape attempt of staff at his office. The girl has filed a complaint stating that she was sexually harassed by the Advocate. Rajesh is said to be absconding
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm