ಬ್ರೇಕಿಂಗ್ ನ್ಯೂಸ್
20-10-21 12:16 pm Mangaluru Correspondent ಕ್ರೈಂ
ಮಂಗಳೂರು, ಅ.20: ಉಳ್ಳಾಲದ ಸೋಮೇಶ್ವರ ತೀರದಲ್ಲಿ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ, ಸಾಗಿಸುತ್ತಿದ್ದಾಗ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಒಂದು ಜೆಸಿಬಿ, ಎರಡು ಟಿಪ್ಪರ್ ಲಾರಿ, ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಸೋಮೇಶ್ವರದ ಪೆರಿಬೈಲ್ ನಲ್ಲಿ ನಿನ್ನೆ ತಡರಾತ್ರಿ 12.30ರ ಸುಮಾರಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಟಿಪ್ಪರ್ ಲಾರಿಗೆ ಮರಳನ್ನು ತುಂಬಿಸುತ್ತಿದ್ದ 7-8 ಜನ ಪೊಲೀಸರನ್ನು ನೋಡಿ ಓಡಿ ಹೋಗಿದ್ದಾರೆ. ಅಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ತಲಪಾಡಿ ನಿವಾಸಿ ರಾಯಲ್ ಡಿಸೋಜ (21) ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮರಳು ಲಾರಿಗೆ ಬೆಂಗಾವಲಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದು, ಯಾವುದೇ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾನೆ. ಅದರಂತೆ, ರಾಯಲ್ ಡಿಸೋಜ ಮತ್ತು ಮಯ್ಯದಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಲ್ಲಿ ಶೇಖರಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಆತನ ಮಾಹಿತಿಯಂತೆ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಇಲ್ಯಾಸ್ ಕೆಸಿ ರೋಡ್, ನೌಶಾದ್, ಫಯಾಜ್ ಕಲ್ಲಾಪು ಇನ್ನಿತರರ ವಿರುದ್ಧ ಕೇಸು ದಾಖಲಿಸಿದ್ದಾರೆ. ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಅಲ್ಲಿನ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ಅರಿತಿದ್ದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಎಸಿಪಿ ರಂಜಿತ್ ಬಂಡಾರು ಜಂಟಿಯಾಗಿ ಮರಳು ಮಾಫಿಯಾ ವಿರುದ್ಧ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಮುದ್ರದಿಂದ ಮರಳೆತ್ತುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
Two trucks, Two arrested for illegal sand transportation at Uchila in Mangalore. Mangalore Law and Order DCP Hariram Shankar and team raided the spot and have arrested the accused.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm