ಬ್ರೇಕಿಂಗ್ ನ್ಯೂಸ್
21-10-21 12:34 pm Mangalore Reporter ಕ್ರೈಂ
ಮಂಗಳೂರು, ಅ.21 : ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ನಟೋರಿಯಸ್ ರೌಡಿಯೊಬ್ಬ ತಲವಾರು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದ್ದು ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಆತನಿಗೆ ಪರಾರಿಯಾಗಲು ಸಹಕರಿಸಿದ ಆರೋಪಿಯನ್ನು ಅಡ್ಡಗಟ್ಟಿ ಪೊಲೀಸರು ಬಂಧಿಸಿದ್ದಾರೆ.
ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದರು. ಧರ್ಮನಗರದ ಮನೆಗೆ ತೆರಳಿದ್ದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನವಾಝ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.

ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ, ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಬೈಕಿನಲ್ಲಿದ್ದ ನವಾಝ್ ನನ್ನು ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ, ಸಿನಿಮಾ ಮಾದರಿಯಲ್ಲಿ ನವಾಝ್ ನನ್ನು ಬಂಧಿಸಿದ್ದಾರೆ. ಈತ ಈ ಹಿಂದೆ ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ದಾವೂದ್ ಎಂಬಾತನ ತಮ್ಮನಾಗಿದ್ದು ಆತನ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುಕ್ತಾರ್ ವಿರುದ್ಧ ಉಳ್ಳಾಲ ಠಾಣೆ ಒಂದರಲ್ಲೇ ಏಳು ಪ್ರಕರಣಗಳಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Ullal Notorious criminal tries to attack Police staffs with Talwar when they went to arrest him at his residence after Warrant was issued against him. The police somehow managed to arrest him at Thokottu. The arrested has Ben identified as Mukthar a resident of Mukacheri.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm