ಬ್ರೇಕಿಂಗ್ ನ್ಯೂಸ್
22-10-21 02:43 pm Mangalore Reporter ಕ್ರೈಂ
ಉಡುಪಿ, ಅ.22 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸ್ನೇಹಿತರ ಜೊತೆ ಸೇರಿ ಪತ್ನಿಯೇ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಪಾರಿನ ವಿವೇಕನಗರದ ನಾಗರಾಜ(36) ಅ.19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪತ್ನಿ ಮಮತಾ ತನ್ನ ಗಂಡ ವಿಪರೀತ ಕುಡಿತದ ಚಟ ಹೊಂದಿದ್ದು ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿದ್ದರು ಎಂದು ದೂರು ನೀಡಿದ್ದಳು. ಇದೀಗ ಮಮತಾ ಮತ್ತು ಆಕೆಯ ಸ್ನೇಹಿತರಾದ ಕುಮಾರ್ ಮತ್ತು ದಿನಕರ್ ಅವರನ್ನು ಪೊಲೀಸರು ಬಂಧಿಸಿದ್ದು ಕೊಲೆ ನಡೆಸಿರುವುದನ್ನು ಪತ್ತೆ ಮಾಡಿದ್ದಾರೆ.

ವಿಪರೀತ ಮದ್ಯ ವ್ಯಸನಿಯಾಗಿದ್ದ ನಾಗರಾಜ್ ತನ್ನ ಜೀವನದ ಬಗ್ಗೆ ಜಿಗುಪ್ಸೆಗೊಂಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮೃತರ ಸಹೋದರಿ ಶಿವಮೊಗ್ಗದ ಸಾಗರ ತಾಲೂಕಿನ ಮಾಲ್ವೆಯ ನಿವಾಸಿ ನಾಗರತ್ನ ಮತ್ತು ಇತರ ಕೆಲವು ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಶಂಕರನಾರಾಯಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದಲ್ಲಿ ಕತ್ತಿನ ಭಾಗದಲ್ಲಿ ಗಾಯದ ಗುರುತು ಇರುವುದನ್ನು ಕುಟುಂಬ ಸದಸ್ಯರು ಗಮನಿಸಿದ್ದು ಕೊಲೆ ಬಗ್ಗೆ ಶಂಕಿಸಿ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ನಾಗರಾಜ್ ತನ್ನ ಪತ್ನಿ ಮತ್ತು ಇತರರು ಸೇರಿ ತನಗೆ ಹಲ್ಲೆ ನಡೆಸಿದ್ದಾಗಿ ಸಹೋದರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು. ಇದೇ ಶಂಕೆಯಲ್ಲಿ ನಾಗರತ್ನ ದೂರಿನಲ್ಲಿ ತಿಳಿಸಿದ್ದರು. ನಾಗರಾಜ್ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಮಮತಾಳನ್ನು ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ನಾಗರಾಜ್ ನಿತ್ಯ ಕುಡುಕನಾಗಿದ್ದು, ಮನೆಯಲ್ಲಿ ದಿನವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು ಇಬ್ಬರು ಅಪ್ರಾಪ್ತರಾಗಿದ್ದು ರಿಮಾಂಡ್ ಹೋಮ್ ಗೆ ಕಳಿಸಲಾಗಿದೆ. ಮಮತಾಗೆ ಆರೋಪಿಗಳ ಜೊತೆ ಅಕ್ರಮ ಸಂಬಂಧ ಇತ್ತೆನ್ನುವ ಅನುಮಾನ ಉಂಟಾಗಿದ್ದು ಶಂಕರನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What was believed to be a case of suicide, reported four days ago, has taken a new twist with the arrest of five accused including wife and two minors under the Shankernarayana Police station limits of Byndoor Taluk.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm