ಬ್ರೇಕಿಂಗ್ ನ್ಯೂಸ್
22-10-21 10:30 pm Mangalore Reporter ಕ್ರೈಂ
ಮಂಗಳೂರು, ಅ.22 : ಮನೆಯೊಂದರಲ್ಲಿ ಪ್ರತಿ ವಾರ ಗೋವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಲ್ಕಿ ಹಾಗೂ ಮೂಡುಬಿದಿರೆ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದು ಕಿನ್ನಿಗೋಳಿಯ ಸಂಕಲಕರಿಯದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಮಾಡಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಕೆ.ಜಿ. ಗೋಮಾಂಸವನ್ನು ಪತ್ತೆ ಮಾಡಿದ್ದಾರೆ. ಬಳಿಕ ಅದರಲ್ಲಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಮೂಲ್ಕಿ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಆಬಳಿಕ ಕಸಾಯಿಖಾನೆ ಇದ್ದ ಜಾಗ ಕಾರ್ಕಳ ಠಾಣೆ ವ್ಯಾಪ್ತಿಗೆ ಬರುತ್ತಿದ್ದ ಕಾರಣ ಅಲ್ಲಿನ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

ಕಸಾಯಿಖಾನೆಗೆಂದು ಮನೆಯ ಬಳಿಯಲ್ಲೇ ಹಟ್ಟಿಯನ್ನು ರಚಿಸಿದ್ದು ಅಲ್ಲಿ ಪ್ರತಿವಾರ ಗೋವನ್ನು ಖರೀದಿಸಿ ತಂದು ಕಟ್ಟಿ ಹಾಕುತ್ತಿದ್ದರು. ಬಳಿಕ ಅದನ್ನು ಪ್ರತಿ ವಾರ ಅಗತ್ಯ ಇದ್ದಷ್ಟು ಮಾಂಸ ಮಾಡುತ್ತಿದ್ದರು. ಸುತ್ತಲಲ್ಲಿ ಹಿಂದುಗಳ ಮನೆಯೇ ಇದ್ದರೂ, ಗೋವನ್ನು ಮಾಂಸ ಮಾಡಿ ಮೂಲ್ಕಿ ವ್ಯಾಪ್ತಿಯ ಹಲವು ಕಡೆಗಳಿಗೆ ಮಾಂಸವನ್ನು ವ್ಯವಸ್ಥಿತವಾಗಿ ಪೂರೈಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇದ್ದರೂ, ಪೊಲೀಸ್ ದೂರು ನೀಡಿರಲಿಲ್ಲ.

ದಾಳಿ ನಡೆಸಿದ ವೇಳೆ, ಆರೋಪಿಯ ಮನೆಯ ಒಳಗೇ ಕಸಾಯಿಖಾನೆ ನಡೆಸುತ್ತಿದ್ದುದು ಪತ್ತೆಯಾಗಿದೆ. ಹೊರಗಡೆ ಇದ್ದ ಹಟ್ಟಿಯಲ್ಲಿ ಎಂಟು ಗೋವುಗಳಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮನೆಯ ಒಳಗಡೆಯೂ ಮಾಂಸ ಮತ್ತು ಮಾಂಸ ಮಾಡಲು ಬಳಸಿದ್ದ ಪರಿಕರಗಳನ್ನೂ ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂದು ಕ್ವಿಂಟಾಲ್ನಷ್ಟು ಗೋಮಾಂಸ ಹಾಗೂ ನಾಲ್ಕು ಆರೋಪಿಗಳನ್ನು ಮೂಲ್ಕಿ ಮತ್ತು ಕಾರ್ಕಳ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಹಸನಬ್ಬ, ರಫೀಕ್, ಇದಿನಬ್ಬ ಹಾಗೂ ಇಬ್ರಾಹಿಂ ಬಂಧಿತರು. ಈ ಪೈಕಿ ಇಬ್ರಾಹಿಂ ಕಸಾಯಿಖಾನೆ ರೂವಾರಿಯಾಗಿದ್ದು ಆತನ ಮನೆಯಲ್ಲೇ ಮಾಂಸ ಮಾಡಿ ರವಾನೆ ಮಾಡಲಾಗುತ್ತಿತ್ತು ಎನ್ನಲಾಗಿದೆ.
Mangalore House converted into slaughter house flesh illegally being traded Bagarang Dal members raid house four arrested near Kinnigoli.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm