ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm