ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am