ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm