ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm