ಬ್ರೇಕಿಂಗ್ ನ್ಯೂಸ್
26-10-21 06:07 pm Headline Karnataka News Network ಕ್ರೈಂ
ಮಡಿಕೇರಿ, ಅ.26 : ಮಡಿಕೇರಿಗೆ ಪ್ರವಾಸಕ್ಕೆಂದು ಬಂದಿದ್ದ ಬಳ್ಳಾರಿ ಮೂಲದ ಯುವತಿ ಹೋಂಸ್ಟೇಯಲ್ಲಿ ಕುಸಿದು ಬಿದ್ದು ಸಾವನಪ್ಪಿದ ಪ್ರಕರಣದಲ್ಲಿ ಮಡಿಕೇರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ನಿವಾಸಿ ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿಘ್ನೇಶ್ವರಿ ಈಶ್ವರನ್(24) ಮೃತ ಯುವತಿ. ಮಡಿಕೇರಿಯ ಅಗ್ನಿಶಾಮಕ ದಳದ ಕಚೇರಿ ಬಳಿಯ ಹೋಂಸ್ಟೇಯಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಬಾತ್ ರೂಮಿನಲ್ಲಿದ್ದಾಗ ಕುಸಿದು ಬಿದ್ದು ಘಟನೆ ಸಂಭವಿಸಿದ್ದರಿಂದ ಗ್ಯಾಸ್ ಗೀಸರ್ ನಿಂದ ಕಾರ್ಬನ್ ಸೋರಿಕೆಯಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಬಳ್ಳಾರಿ ಮೂಲದ ಯುವತಿ ವಿಘ್ನೇಶ್ವರಿ ಈಶ್ವರನ್ ಎಂಬಿಎ ಪೂರೈಸಿದ್ದು, 9 ತಿಂಗಳಿಂದ ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ‘ವರ್ಕ್ ಫ್ರಂ ಹೋಂ’ ಇದ್ದುದರಿಂದ ಮನೆಯಲ್ಲಿದ್ದೇ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ವಿಘ್ನೇಶ್ವರಿ ಮುಂಬೈನಿಂದ ಹೊರಟು ಬೆಂಗಳೂರಿಗೆ ಆಗಮಿಸಿದ್ದು ಅಲ್ಲಿ ಕೆಲಸದಲ್ಲಿದ್ದ ನಾಲ್ವರು ಗೆಳತಿಯರ ಜೊತೆ ಶನಿವಾರ ಮಡಿಕೇರಿಗೆ ತೆರಳಿದ್ದರು. ಮಡಿಕೇರಿಯಲ್ಲಿ ಉಳಿದುಕೊಳ್ಳಲು ಹೋಂ ಸ್ಟೇಯನ್ನು ಆನ್ಲೈನ್ ಮೂಲಕ ಬುಕ್ ಮಾಡಿದ್ದರು. ನಗರಕ್ಕೆ ಆಗಮಿಸಿದ 5 ಮಂದಿ ಯುವತಿಯರು ಹೋಂ ಸ್ಟೇಯಲ್ಲಿ ತಂಗಿದ್ದರಲ್ಲದೆ, ಶನಿವಾರ ಮತ್ತು ರವಿವಾರ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಯುವತಿಯರ ಬಳಗ ಸೋಮವಾರ ಬೆಳಗ್ಗೆ ಹೋಂಸ್ಟೇಯನ್ನು ಖಾಲಿ ಮಾಡಿ ಜೀಪ್ನಲ್ಲಿ ಮಾಂದಲ್ ಪಟ್ಟಿಗೆ ತೆರಳುವ ಸಿದ್ಧತೆಯಲ್ಲಿದ್ದರು ಎನ್ನಲಾಗಿದೆ.

ಆದರೆ, ಭಾನುವಾರ ರಾತ್ರಿ 9 ಗಂಟೆಯ ವೇಳೆಗೆ ವಿಘ್ನೇಶ್ವರಿ ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ್ದ ವೇಳೆ ಘಟನೆ ನಡೆದಿತ್ತು. ಸ್ನಾನಕ್ಕೆ ಹೋಗಿ ಹಲವು ಸಮಯ ಕಳೆದರೂ ಹೊರಬರದೇ ಇದ್ದರಿಂದ ಬಾಗಿಲು ತೆರದು ನೋಡಿದಾಗ ವಿಘ್ನೇಶ್ವರಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಆಕೆಯನ್ನು ವಾಹನದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದರು.
ನಗರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ಮೃತ ಯುವತಿಯ ತಂದೆ ಈಶ್ವರನ್ ಸೋಮವಾರ ಬೆಳಗ್ಗೆ ಮಡಿಕೇರಿಗೆ ಆಗಮಿಸಿದ್ದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಮಗಳು ದೈಹಿಕವಾಗಿ ಆರೋಗ್ಯದಿಂದಿದ್ದು, ಯಾವುದೇ ಸಮಸ್ಯೆ ಆಕೆಗೆ ಇರಲಿಲ್ಲ. ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.
Girl from Bellary found dead in Lodge at Madikeri. The deceased has been identified as Vigneshwari (24).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am