ಬ್ರೇಕಿಂಗ್ ನ್ಯೂಸ್
26-10-21 06:07 pm Headline Karnataka News Network ಕ್ರೈಂ
ಮಡಿಕೇರಿ, ಅ.26 : ಮಡಿಕೇರಿಗೆ ಪ್ರವಾಸಕ್ಕೆಂದು ಬಂದಿದ್ದ ಬಳ್ಳಾರಿ ಮೂಲದ ಯುವತಿ ಹೋಂಸ್ಟೇಯಲ್ಲಿ ಕುಸಿದು ಬಿದ್ದು ಸಾವನಪ್ಪಿದ ಪ್ರಕರಣದಲ್ಲಿ ಮಡಿಕೇರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ನಿವಾಸಿ ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿಘ್ನೇಶ್ವರಿ ಈಶ್ವರನ್(24) ಮೃತ ಯುವತಿ. ಮಡಿಕೇರಿಯ ಅಗ್ನಿಶಾಮಕ ದಳದ ಕಚೇರಿ ಬಳಿಯ ಹೋಂಸ್ಟೇಯಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಬಾತ್ ರೂಮಿನಲ್ಲಿದ್ದಾಗ ಕುಸಿದು ಬಿದ್ದು ಘಟನೆ ಸಂಭವಿಸಿದ್ದರಿಂದ ಗ್ಯಾಸ್ ಗೀಸರ್ ನಿಂದ ಕಾರ್ಬನ್ ಸೋರಿಕೆಯಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಬಳ್ಳಾರಿ ಮೂಲದ ಯುವತಿ ವಿಘ್ನೇಶ್ವರಿ ಈಶ್ವರನ್ ಎಂಬಿಎ ಪೂರೈಸಿದ್ದು, 9 ತಿಂಗಳಿಂದ ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ‘ವರ್ಕ್ ಫ್ರಂ ಹೋಂ’ ಇದ್ದುದರಿಂದ ಮನೆಯಲ್ಲಿದ್ದೇ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ವಿಘ್ನೇಶ್ವರಿ ಮುಂಬೈನಿಂದ ಹೊರಟು ಬೆಂಗಳೂರಿಗೆ ಆಗಮಿಸಿದ್ದು ಅಲ್ಲಿ ಕೆಲಸದಲ್ಲಿದ್ದ ನಾಲ್ವರು ಗೆಳತಿಯರ ಜೊತೆ ಶನಿವಾರ ಮಡಿಕೇರಿಗೆ ತೆರಳಿದ್ದರು. ಮಡಿಕೇರಿಯಲ್ಲಿ ಉಳಿದುಕೊಳ್ಳಲು ಹೋಂ ಸ್ಟೇಯನ್ನು ಆನ್ಲೈನ್ ಮೂಲಕ ಬುಕ್ ಮಾಡಿದ್ದರು. ನಗರಕ್ಕೆ ಆಗಮಿಸಿದ 5 ಮಂದಿ ಯುವತಿಯರು ಹೋಂ ಸ್ಟೇಯಲ್ಲಿ ತಂಗಿದ್ದರಲ್ಲದೆ, ಶನಿವಾರ ಮತ್ತು ರವಿವಾರ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಯುವತಿಯರ ಬಳಗ ಸೋಮವಾರ ಬೆಳಗ್ಗೆ ಹೋಂಸ್ಟೇಯನ್ನು ಖಾಲಿ ಮಾಡಿ ಜೀಪ್ನಲ್ಲಿ ಮಾಂದಲ್ ಪಟ್ಟಿಗೆ ತೆರಳುವ ಸಿದ್ಧತೆಯಲ್ಲಿದ್ದರು ಎನ್ನಲಾಗಿದೆ.

ಆದರೆ, ಭಾನುವಾರ ರಾತ್ರಿ 9 ಗಂಟೆಯ ವೇಳೆಗೆ ವಿಘ್ನೇಶ್ವರಿ ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ್ದ ವೇಳೆ ಘಟನೆ ನಡೆದಿತ್ತು. ಸ್ನಾನಕ್ಕೆ ಹೋಗಿ ಹಲವು ಸಮಯ ಕಳೆದರೂ ಹೊರಬರದೇ ಇದ್ದರಿಂದ ಬಾಗಿಲು ತೆರದು ನೋಡಿದಾಗ ವಿಘ್ನೇಶ್ವರಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಆಕೆಯನ್ನು ವಾಹನದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದರು.
ನಗರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ಮೃತ ಯುವತಿಯ ತಂದೆ ಈಶ್ವರನ್ ಸೋಮವಾರ ಬೆಳಗ್ಗೆ ಮಡಿಕೇರಿಗೆ ಆಗಮಿಸಿದ್ದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಮಗಳು ದೈಹಿಕವಾಗಿ ಆರೋಗ್ಯದಿಂದಿದ್ದು, ಯಾವುದೇ ಸಮಸ್ಯೆ ಆಕೆಗೆ ಇರಲಿಲ್ಲ. ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.
Girl from Bellary found dead in Lodge at Madikeri. The deceased has been identified as Vigneshwari (24).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm