ಬ್ರೇಕಿಂಗ್ ನ್ಯೂಸ್
27-10-21 03:03 pm Mangalore Reporter ಕ್ರೈಂ
ಬಂಟ್ವಾಳ, ಅ.27: ಬಿಜೆಪಿ ಕಾರ್ಯಕರ್ತನ ಮೇಲೆ ಅದೇ ಪಕ್ಷದ ಕಾರ್ಯಕರ್ತರು ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನಲ್ಲಿ ನಡೆದಿದೆ. ಬಡಗಬೆಳ್ಳೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಪ್ರಕಾಶ್ ಬೆಳ್ಳೂರು ಮೇಲೆ ಆತನ ಮನೆಗೇ ನುಗ್ಗಿ ಹಲ್ಲೆ ನಡೆಸಿ, ತಲವಾರು ದಾಳಿ ನಡೆಸಲಾಗಿದೆ.
ಕಿವಿಯ ಭಾಗಕ್ಕೆ ತಲವಾರು ಏಟು ಬಿದ್ದು ಗಾಯಗೊಂಡಿರುವ ಪ್ರಕಾಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಪರಿಸರದ ನಿತಿನ್, ನಿಶಾಂತ್ ಮತ್ತಿತರ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ಇವರ ನಡುವೆ, ಹಣದ ವಿಚಾರದಲ್ಲಿ ಗಲಾಟೆ ನಡೆದಿತ್ತು. ವರ್ಷದ ಹಿಂದೆ ನಿತಿನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೊಲೆಯತ್ನ ಕೇಸು ದಾಖಲಾಗಿತ್ತು. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲೆಂದು ಸ್ಥಳೀಯ ಪುಢಾರಿ ಆಗಿರುವ ಪ್ರಕಾಶ್ ಬೆಳ್ಳೂರುಗೆ ನಿತಿನ್ 25 ಸಾವಿರ ರೂ. ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಇದೇ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ವಾಗ್ವಾದ, ಫೇಸ್ಬುಕ್ ನಲ್ಲೂ ಮುಂದುವರಿದಿತ್ತು. ಪ್ರಕಾಶ್ ಬೆಳ್ಳೂರು ತಾನು ಹಣ ಪಡೆದಿಲ್ಲ. ಬೇಕಾದರೆ ಪಣೋಲಿಬೈಲಿಗೆ ಬಂದು ಪ್ರಮಾಣ ಮಾಡುತ್ತೇನೆ. ಹಣ ಕೊಟ್ಟಿದ್ದಾರೆ ಎಂದವರು ಅಲ್ಲಿಗೆ ಬಂದು ಪ್ರಮಾಣ ಮಾಡಲಿ ಎಂದು ಫೇಸ್ಬುಕ್ ನಲ್ಲಿ ಸವಾಲು ಹಾಕಿದ್ದಾರೆ. ಅದೇ ಪೋಸ್ಟ್ ನಲ್ಲಿ ನಿಶಾಂತ್ ಮತ್ತು ಆತನ ಗೆಳೆಯರು ಹೀನಾಯವಾಗಿ ನಿಂದಿಸಿ ಪ್ರಕಾಶ್ ಬಗ್ಗೆ ಬರೆದಿದ್ದರು. ಇದೇ ವಿಚಾರ ಮಾತಿಗೆ ಮಾತು ಬೆಳೆದಿದ್ದು, ನಿತಿನ್, ನಿಶಾಂತ್ ಮತ್ತಿತರರು ಮಂಗಳವಾರ ಸಂಜೆ ಪ್ರಕಾಶ್ ಬೆಳ್ಳೂರು ಮನೆಗೆ ನುಗ್ಗಿ ತಲವಾರು ದಾಳಿ ನಡೆಸಿದ್ದಾರೆ.
ಆದರೆ, ಈ ವೇಳೆ ಪ್ರಕಾಶ್ ತಲವಾರು ಕಡಿತದಿಂದ ತಪ್ಪಿಸಿಕೊಂಡಿದ್ದು ಕಿವಿಗೆ ಮಾತ್ರ ಗಾಯವಾಗಿತ್ತು. ಆನಂತರ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ. ಬಳಿಕ ಪ್ರಕಾಶ್ ಸಂಬಂಧಿಕರು ಬಂದು ಸಮಾಧಾನ ಹೇಳಿ, ಕಡಿಯಲು ಬಂದವರನ್ನು ಕಳಿಸಿಕೊಟ್ಟಿದ್ದರು. ಘಟನೆ ಸಂಬಂಧಿಸಿ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
Mangalore Bjp member attacked by BJP members in Bantwal over financial dispute. Prakash is said to be admitted in the hospital and is said to be out of danger.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm