ಬ್ರೇಕಿಂಗ್ ನ್ಯೂಸ್
27-10-21 03:03 pm Mangalore Reporter ಕ್ರೈಂ
ಬಂಟ್ವಾಳ, ಅ.27: ಬಿಜೆಪಿ ಕಾರ್ಯಕರ್ತನ ಮೇಲೆ ಅದೇ ಪಕ್ಷದ ಕಾರ್ಯಕರ್ತರು ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನಲ್ಲಿ ನಡೆದಿದೆ. ಬಡಗಬೆಳ್ಳೂರು ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಪ್ರಕಾಶ್ ಬೆಳ್ಳೂರು ಮೇಲೆ ಆತನ ಮನೆಗೇ ನುಗ್ಗಿ ಹಲ್ಲೆ ನಡೆಸಿ, ತಲವಾರು ದಾಳಿ ನಡೆಸಲಾಗಿದೆ.
ಕಿವಿಯ ಭಾಗಕ್ಕೆ ತಲವಾರು ಏಟು ಬಿದ್ದು ಗಾಯಗೊಂಡಿರುವ ಪ್ರಕಾಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ಪರಿಸರದ ನಿತಿನ್, ನಿಶಾಂತ್ ಮತ್ತಿತರ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ಇವರ ನಡುವೆ, ಹಣದ ವಿಚಾರದಲ್ಲಿ ಗಲಾಟೆ ನಡೆದಿತ್ತು. ವರ್ಷದ ಹಿಂದೆ ನಿತಿನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೊಲೆಯತ್ನ ಕೇಸು ದಾಖಲಾಗಿತ್ತು. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲೆಂದು ಸ್ಥಳೀಯ ಪುಢಾರಿ ಆಗಿರುವ ಪ್ರಕಾಶ್ ಬೆಳ್ಳೂರುಗೆ ನಿತಿನ್ 25 ಸಾವಿರ ರೂ. ಹಣವನ್ನು ನೀಡಿದ್ದಾನೆ ಎನ್ನಲಾಗಿದೆ.
ಇದೇ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ವಾಗ್ವಾದ, ಫೇಸ್ಬುಕ್ ನಲ್ಲೂ ಮುಂದುವರಿದಿತ್ತು. ಪ್ರಕಾಶ್ ಬೆಳ್ಳೂರು ತಾನು ಹಣ ಪಡೆದಿಲ್ಲ. ಬೇಕಾದರೆ ಪಣೋಲಿಬೈಲಿಗೆ ಬಂದು ಪ್ರಮಾಣ ಮಾಡುತ್ತೇನೆ. ಹಣ ಕೊಟ್ಟಿದ್ದಾರೆ ಎಂದವರು ಅಲ್ಲಿಗೆ ಬಂದು ಪ್ರಮಾಣ ಮಾಡಲಿ ಎಂದು ಫೇಸ್ಬುಕ್ ನಲ್ಲಿ ಸವಾಲು ಹಾಕಿದ್ದಾರೆ. ಅದೇ ಪೋಸ್ಟ್ ನಲ್ಲಿ ನಿಶಾಂತ್ ಮತ್ತು ಆತನ ಗೆಳೆಯರು ಹೀನಾಯವಾಗಿ ನಿಂದಿಸಿ ಪ್ರಕಾಶ್ ಬಗ್ಗೆ ಬರೆದಿದ್ದರು. ಇದೇ ವಿಚಾರ ಮಾತಿಗೆ ಮಾತು ಬೆಳೆದಿದ್ದು, ನಿತಿನ್, ನಿಶಾಂತ್ ಮತ್ತಿತರರು ಮಂಗಳವಾರ ಸಂಜೆ ಪ್ರಕಾಶ್ ಬೆಳ್ಳೂರು ಮನೆಗೆ ನುಗ್ಗಿ ತಲವಾರು ದಾಳಿ ನಡೆಸಿದ್ದಾರೆ.
ಆದರೆ, ಈ ವೇಳೆ ಪ್ರಕಾಶ್ ತಲವಾರು ಕಡಿತದಿಂದ ತಪ್ಪಿಸಿಕೊಂಡಿದ್ದು ಕಿವಿಗೆ ಮಾತ್ರ ಗಾಯವಾಗಿತ್ತು. ಆನಂತರ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ. ಬಳಿಕ ಪ್ರಕಾಶ್ ಸಂಬಂಧಿಕರು ಬಂದು ಸಮಾಧಾನ ಹೇಳಿ, ಕಡಿಯಲು ಬಂದವರನ್ನು ಕಳಿಸಿಕೊಟ್ಟಿದ್ದರು. ಘಟನೆ ಸಂಬಂಧಿಸಿ ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
Mangalore Bjp member attacked by BJP members in Bantwal over financial dispute. Prakash is said to be admitted in the hospital and is said to be out of danger.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm