ಬ್ರೇಕಿಂಗ್ ನ್ಯೂಸ್
27-10-21 04:37 pm Mangalore Reporter ಕ್ರೈಂ
ಉಡುಪಿ, ಅ.27 : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಘಟನೆ ನಡೆದಿತ್ತು. ವೆಂಕಟೇಶ್ ತನ್ನ ಮನೆಗೆ ಆಟ ಆಡಲೆಂದು ಬಂದಿದ್ದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತ ಅನಾರೋಗ್ಯಕ್ಕೀಡಾಗಿದ್ದು ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಮಗು ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಲಾಗಿತ್ತು. ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿಯನ್ನು ವಿಚಾರಣೆಗೆ ಗುರಿಪಡಿಸಿತ್ತು. ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿತ್ತು. ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
Judge of the district additional and sessions court which also is the fast track court for cases under the Protection of Children from Sexual Offences (POCSO) Act, sentenced an accused to ten years jail term. Judge of the court, Yermal Kalpana, who found that the charge of sexual atrocity committed by the accused on a five-year-old girl who had been to neighbouring house to play, has been proved, awarded the above sentence.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm